Sunday, August 9, 2026
20.8 C
Belagavi

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

advertisement

spot_img

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡಿನಲ್ಲಿ ಅಚ್ಚರಿ ಫಲಿತಾಂಶ

ಬೆಂಗಳೂರು, 04:

“ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಸೋಮವಾರ ಮಾತನಾಡಿದರು.

ದಾವಣಗೆರೆ ದಕ್ಷಿಣದಲ್ಲಿ ಗೆಲುವಿನ ಅಂತರ 25-30 ಸಾವಿರಕ್ಕಿಂತ ಕಡಿಮೆ ಆಗಿರುವ ಬಗ್ಗೆ ಕೇಳಿದಾಗ, “ಇಷ್ಟೆಲ್ಲಾ ಗೊಂದಲ ಆದಮೇಲೆ 25-30 ಸಾವಿರ ಅಂತರದ ಗೆಲುವು ಸಿಗುವುದಿಲ್ಲ ಎಂಬುದು ಗೊತ್ತಿತ್ತು. ಆದರೆ ಆರಾಮವಾಗಿ ಗೆಲ್ಲುತೇವೆ ಎಂದು ಗೊತ್ತಿತ್ತು. ಎಸ್ ಡಿಪಿಐನಿಂದ ಅಪಾಯವಾಗಿದೆ” ಎಂದರು.

ಎಸ್ ಡಿಪಿಐ ಮತಗಳಿಕೆಯ ಬಗ್ಗೆ ಕೇಳಿದಾಗ, “ಅದರ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಮಾತನಾಡಿದ್ದಾರೆ. ನಾನೇನು ಮಾತನಾಡಲು ಹೋಗುವುದಿಲ್ಲ. ಎಸ್ ಡಿಪಿಐ ಅನ್ನು ಹಗುರವಾಗಿ ನಾವು ಪರಿಗಣಿಸಿರಲಿಲ್ಲ. ಅದೂ ಸಹ ರಾಜಕೀಯ ಪಕ್ಷ. ಅವರು ಅಲ್ಪಸಂಖ್ಯಾತರ ಮತ ತೆಗೆದುಕೊಂಡರು” ಎಂದರು.

ಚುನಾವಣೆ ಫಲಿತಾಂಶವು ರಾಜ್ಯದಲ್ಲಿ ಏನಾದರೂ ಬದಲಾವಣೆ ತರಲಿದೆಯೇ ಎಂದು ಕೇಳಿದಾಗ, “ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ. ಒಂದಷ್ಟು ಜನಕ್ಕೆ ಸಂತೋಷ, ಒಂದಷ್ಟು ಜನಕ್ಕೆ ಬೇಜಾರು ಆಗಬಹುದು. ಡಬಲ್ ಎಂಜಿನ್ ಸರ್ಕಾರ ಇದ್ದಾಗಲೇ ಅವರಿಗೆ ಏನೂ ಮಾಡಲಿಲ್ಲ” ಎಂದು ಹೇಳಿದರು.

ಕೇರಳದಲ್ಲಿ ಯುಡಿಎಫ್ ಮೈತ್ರಿಯ ಗೆಲುವಿನ ಬಗ್ಗೆ ಕೇಳಿದಾಗ, “ಅಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಗೆದ್ದಿದ್ದೆವು. ಎಲ್ ಡಿಎಫ್ 10 ವರ್ಷಗಳ ಕಾಲ ಆಡಳಿತ ನಡೆಸಿದೆ. ಅದಕ್ಕೆ ಜನ ಬದಲಾವಣೆ ಬೇಕು ಎಂದು ಫಲಿತಾಂಶ ನೀಡಿದ್ದಾರೆ. ಪ್ರಚಾರಕ್ಕೂ ಹೋದಾಗಲೂ ಜನ ನಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದರು” ಎಂದು ಹೇಳಿದರು.

ತಮಿಳುನಾಡಿನ ಫಲಿತಾಂಶ ಅಚ್ಚರಿ ತಂದಿದೆ

ತಮಿಳುನಾಡಿನ ಫಲಿತಾಂಶದ ಬಗ್ಗೆ ಕೇಳಿದಾಗ, “ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶ. ಅಲ್ಲಿ ಹೊಸ ಯುಗ ಪ್ರಾರಂಭವಾಗಿದೆ. ಜನರ ನಾಡಿಮಿಡಿತವನ್ನು ನಾವು ಗ್ರಹಿಸಲು ಆಗಲಿಲ್ಲ. ಸ್ಥಳೀಯ ನಾಯಕರು ಈ ಬಗ್ಗೆ ಹೇಳಿದ್ದರು. 40 ವರ್ಷಗಳ ರಾಜಕೀಯದಲ್ಲಿ ಸಂಬಂಧ, ನೆಂಟಸ್ತನ ಬಿಡಲು ಆಗುತ್ತದೆಯೇ” ಎಂದರು.

ಸ್ಟಾಲಿನ್ ಅವರ ಜೊತೆ ರಾಹುಲ್ ಗಾಂಧಿ ಅವರು ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ ಎನ್ನುವ ಬಗ್ಗೆ ಕೇಳಿದಾಗ, “ಆ ಬಗ್ಗೆ ಮಾತನಾಡಲು ನಾನು ಹೋಗುವುದಿಲ್ಲ. ಹೈಕಮಾಂಡ್ ತೀರ್ಮಾನ ಮಾಡಿದಂತೆ ನಾವೆಲ್ಲರೂ ಅಲ್ಲಿಗೆ ಹೋಗಿದ್ದೇವಲ್ಲ” ಎಂದರು.

ಸೆಲೆಬ್ರಿಟಿ ಅನ್ನುವ ಕಾರಣಕ್ಕೆ ಜನ ಮತ ಹಾಕಿದ್ದಾರೆಯೇ ಎಂದು ಕೇಳಿದಾಗ, “ಶೇ 30-40 ರಷ್ಟು ಮತ ಹೋಗಬಹುದು ಎಂದು ಕೊಂಡಿದ್ದೆವು. ಆದರೆ ಅದಕ್ಕೂ ಹೆಚ್ಚು ಮತ ಅವರಿಗೆ ಹೋಗಿದೆ” ಎಂದರು.

ಅಸ್ಸಾಂ ರಾಜ್ಯದಲ್ಲಿ ನಿರೀಕ್ಷಿತ ಫಲಿತಾಂಶ ಬಾರದಿರುವ ಬಗ್ಗೆ ಕೇಳಿದಾಗ, “ನಾವು 50- 60 ಸ್ಥಾನ ಬರುತ್ತೇವೆ ಎಂದು ಕೊಂಡಿದ್ದೆವು. ಅಲ್ಲಿನ ಸ್ಥಳೀಯ ನಾಯಕರೂ 50 ಸ್ಥಾನಗಳನ್ನು ಮುಟ್ಟುತ್ತೇವೆ ಎಂದು ಹೇಳಿದ್ದರು” ಎಂದರು.

ಸೋಲಿಗೆ ಕಾರಣ ಏನಿರಬಹುದು ಎಂದು ಕೇಳಿದಾಗ, “ಕ್ಷೇತ್ರ ಮರುವಿಂಗಡಣೆ ಮಾಡುವಾಗ ಅಲ್ಪಸಂಖ್ಯಾತರು ಒಂದೇ ಕಡೆ ಬರುವಂತೆ ಮಾಡಿದ್ದಾರೆ. ಉಪಾಯವಾಗಿಯೇ ಇದನ್ನು ಮಾಡಲಾಗಿದೆ” ಎಂದರು.

ಪಶ್ಚಿಮ ಬಂಗಾಳದ ಬಗ್ಗೆ ಕೇಳಿದಾಗ, “ಅಲ್ಲಿ ವ್ಯವಸ್ಥಿತವಾಗಿ ಅಧಿಕಾರ ದುರುಪಯೋಗವಾಗಿದೆ. ಎಲೆಕ್ಷನ್ ಕಮಿಷನ್ ಅನ್ನು ಎಷ್ಟು ದುರುಪಯೋಗ ಪಡಿಸಿಕೊಳ್ಳಬೇಕೋ ಅಷ್ಟು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಹಿಂದೆ ಬಹಳ ಪ್ರಯತ್ನ ಮಾಡಿದರು. ಈಗ ಎರಡು ಲಕ್ಷಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕಿದ ಕಾರಣಕ್ಕೆ ಬದಲಾವಣೆಯಾಗಿದೆ” ಎಂದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img