Monday, June 1, 2026
26.1 C
Belagavi

ಹಾವೇರಿ ಅತಿ ವೇಗವಾಗಿ ಬೆಳೆಯುತ್ತಿರುವ ಜಿಲ್ಲೆ: ಬಸವರಾಜ ಬೊಮ್ಮಾಯಿ

advertisement

spot_img

ಹಾವೇರಿ ಅತಿ ವೇಗವಾಗಿ ಬೆಳೆಯುತ್ತಿರುವ ಜಿಲ್ಲೆ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕೃಷಿ ಪ್ರಧಾನವಾಗಿರುವ ಹಾವೇರಿ ಜಿಲ್ಲೆ ಅತಿ ವೇಗವಾಗಿ ಬೇಲೆಯುತ್ತಿದ್ದು, ಈ ನಗರಕ್ಕೆ ಕಿರೀಟ ಪ್ರಾಯವಾಗಿ ಸುಸಜ್ಜಿತವಾದ ಕಲ್ಯಾಣ ಮಂಟಪ ನಿರ್ಮಾಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಹಾವೇರಿಯ ಗುತ್ತಲ ರಸ್ತೆಯಲ್ಲಿ ಎಸ್. ಪಿ. ಗ್ರಾಂಡ್ ಕನ್ವೆನ್ಷನ್ ಹಾಲ್ ಉದ್ಘಾಟನೆಯನ್ನು ನೇರವೇರಿಸಿ ಮಾತನಾಡಿದರು. ಹಾವೇರಿಯಲ್ಲಿ ಸುಸಜ್ಜಿತ ಕಲ್ಯಾಣ ಮಂಟಪ ನಿರ್ಮಾಣ ಮಾಡಿರುವ ಪ್ರಕಾಶ್ ಮತ್ತು ಅವರ ಸಹೋದರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಾವೇರಿಗೆ ಇದು ಅವಶ್ಯಕತೆ ಇತ್ತು. ಹಾವೆರಿ ನಗರ ದೊಡ್ಡದಾಗಿ ಬೆಳೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಗಲ್ಲಿ ಅತಿ ವೇಗವಾಗಿ ಬೇಲೆಯುತ್ತಿರುವ ನಗರ ಹಾವೇರಿ. ಹಾವೇರಿ ಜಿಲ್ಲೆ ಕೃಷಿ ಪ್ರಧಾನವಾದರೂ ಜನರು ಬಹಳ ಸಾಹಸಿಗರು, ಕೃಷಿಯಲ್ಲಿ ಲಾಭಮಾಡಿರುವ ರೈತರಿದ್ದಾರೆ. ಹಾವೇರಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಬಂದಮೇಲೆ ಸುಮಾರು 50 ಸಾವಿರ ಎಕರೆ ರಾಣೆಬೆನ್ನೂರು, ಹಿರೆಕೆರೂರು ತಾಲೂಕಿನಲ್ಲಿ ಬಹಳಷ್ಟು ಅಭಿವೃದ್ಧಿಯಾಗಿದೆ. ಭದ್ರಾ ಮೇಲ್ದಂಡೆ ಮಾಡುವಾಗ ಅದು ಸಾಧ್ಯವಿಲ್ಲ ಅಂತ ಹೇಳಿದ್ದರು. ಎಚ್. ಕೆ. ಪಾಟೀಲರು 2002 ರಲ್ಲಿ ತಂದಿದ್ದರು‌. ನಾನು 2012 ರಲ್ಲಿ ನೀರಾವರಿ ಮಂತ್ರಿಯಾಗಿ ಮಾಡುವುದಾಗಿ ಹೇಳಿದೆ. ಬನ್ನಿಕೋಡರು ಇದು ಸಾಧ್ಯವಿಲ್ಲ ನೀರಾವರಿ ಮಂತ್ರಿ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದರು. ಹಿರೆಕೆರೂರು ಭಾಗದಲ್ಲಿ ಬಹಳ ಆಳವಾದ ಪ್ರದೇಶದಲ್ಲಿ ದೊಡ್ಡ ಬಂಡೆ ಇತ್ತು. ಅಲ್ಲಿ ಕಾಮಗಾರಿ ಮಾಡುವುದು ಕಷ್ಟವಾಗಿತ್ತು. ಕಡೆಗೆ ಕೊಂಕಣ ರೈಲ್ವೆ ಅಧಿಕಾರಿಗಳನ್ನು ಕರೆದುಕೊಂಡು ಬಂದು ಸುಮಾರು ತೊಂಬತ್ತು ದಿನ ಬ್ಲಾಸ್ಟ್ ಮಾಡಿ ಯೋಜನೆ ಮಾಡಿದೆವು.

ಆಗ ಹಿರೆಕೆರೂರು ತಾಲೂಕಿನಲ್ಲ ನೀರಾವರಿ ಮಾಡಿದೆವು. ಈಗ ರಾಣೆಬೆನ್ನೂರು ಮತ್ತು ಬ್ಯಾಡಗಿ ತಾಲೂಕಿನಗಲ್ಲಿ ಮಾಡಿದ್ದೇವೆ. ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ, ಜಿಲ್ಲೆಯಲ್ಲಿ ಹೈನುಗಾರಿಕೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಪ್ರತ್ಯೇಕ ಹಾಲು ಘಟಕ ಮಾಡಿದ್ದೇವೆ. ಪೌಲ್ಟ್ರಿದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ.‌ಚಹಾವೇರಿ ಕೃಷಿ ಜೊತೆಗೆ ಇತರ ಉದ್ಯಮಗಳು ಬೆಳೆಯುತ್ತಿವೆ. ಅದಕ್ಕಾಗಿ ಇಂತಹ ಕಲ್ಯಾಣ ಮಂಟಪ ಅಗತ್ಯವಿತ್ತು. ಹಾವೇರಿಗೆ ಇದು ಕಿರೀಟ ಪ್ರಾಯವಾಗಲಿದೆ. ದೊಡ್ಡ ಸಾಧನೆ ಮಾಡಿದ್ದೀರಿ, ನಿಮ್ಮ ಹೆಸರು ನಿಮ್ಮ ಮನೆತನದ ಹೆಸರು ಉಳಿಯುವಂತೆ ಆಗುತ್ತದೆ. ಇದರಿಂದ ಬಹಳಷ್ಟು ಜನರಿಗೆ ಉದ್ಯೋಗ ಸಿಗುತ್ತದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಹಲವಾರು ಪ್ರಮುಖರು ಹಾಗೂ ಮಠಾಧೀಶರು ಸೇರಿದಂತೆ ಮಾಲಕರುಗಳಾದ ಪ್ರಕಾಶ ಹಾವೇರಿ, ಬಸಯ್ಯ ಹಿರಿಯಾಳಮಠ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img