Wednesday, August 12, 2026
20.7 C
Belagavi

ಅಕ್ರಮ ಸಂಬಂಧದ ಶಂಕೆ ಮಲಗಿದ್ದಾಗ ಹೆಂಡತಿಯನ್ನ ಕೊಚ್ಚಿ ಕೊಂದ ಗಂಡ

advertisement

spot_img

ಅಕ್ರಮ ಸಂಬಂಧದ ಶಂಕೆ ಮಲಗಿದ್ದಾಗ ಹೆಂಡತಿಯನ್ನ ಕೊಚ್ಚಿ ಕೊಂದ ಗಂಡ

ಅಥಣಿ:- ಕುಡಿತದ ಚಟ ಹಾಗೂ ಪತ್ನಿಯ ಮೇಲಿನ ಸಂಶಯದ ಭೂತಕ್ಕೆ ಬಲಿಯಾದ ಪತಿಯೊಬ್ಬ ತನ್ನ ಹೆಂಡತಿಯನ್ನು ಮಲಗಿದ್ದಲ್ಲೇ ಮಾರಕಾಸ್ತ್ರಗಳಿಂದ ಕಡಿದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲೂಕಿನ ಕಟಗೇರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

​ಶೋಭಾ ಪರಗೂಂಡ ಸಾರವಾಡ (35) ಕೊಲೆಯಾದ ದುರ್ದೈವಿ. ಈಕೆಯ ಪತಿ ಪರಗೂಂಡ ಸಾರವಾಡನೇ ತನ್ನ ಪತ್ನಿಯನ್ನು ಬರ್ಬರವಾಗಿ ಕೊಂದ ಆರೋಪಿಯಾಗಿದ್ದಾನೆ,ಮೂಲತಃ ಅಥಣಿ ತಾಲೂಕಿನ ಖವಟಗೋಪ್ಪ ಗ್ರಾಮದ ನಿವಾಸಿಗಳಾಗಿರುವ ಈ ದಂಪತಿ, ಪ್ರಸ್ತುತ ಕಟಗೇರಿಯಲ್ಲಿ ನೆಲೆಸಿದ್ದರು.ಆರೋಪಿ ಪರಗೂಂಡನಿಗೆ ಕುಡಿತದ ಚಟವಿತ್ತು. ದಂಪತಿಗೆ ವಿವಾಹವಾಗಿ 15 ವರ್ಷಗಳೇ ಕಳೆದಿದ್ದರೂ, ಆತ ತನ್ನ ಹೆಂಡತಿಯ ಮೇಲೆ ವಿನಾಕಾರಣ ಸಂಶಯ ಪಡುತ್ತಿದ್ದನು,ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಕಲಹ ಏರ್ಪಡುತ್ತಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ, ಘಟನೆಯ ದಿನ ರಾತ್ರಿ ಶೋಭಾ ಅವರು ಗಾಢ ನಿದ್ರೆಯಲ್ಲಿದ್ದಾಗ, ಆರೋಪಿ ಪತಿಯು ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿದ್ದಾನೆ. ತೀವ್ರವಾಗಿ ಗಾಯಗೊಂಡ ಶೋಭಾ ಅವರು ರಕ್ತದ ಮಡುವಿನಲ್ಲಿ ಒದ್ದಾಡಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.ಮೃತ ಶೋಭಾ ಅವರು ಕಟಗೇರಿಯ ಆವಜಿಕರ ಮಠದ ಶಾಲೆಯಲ್ಲಿ ಮಕ್ಕಳಿಗೆ ಅಡುಗೆ ಮಾಡುವ ಕೆಲಸ ಮಾಡಿಕೊಂಡು, ತನ್ನ ಸಂಸಾರವನ್ನು ನಿಭಾಯಿಸುತ್ತಿದ್ದರು. ಶಾಲೆಗೆ ಹೋಗುವ ಮಕ್ಕಳಿಗೆ ಪ್ರತಿದಿನ ಅನ್ನ ಬಡಿಸುತ್ತಿದ್ದ ಮಹಿಳೆ ಇಂದು ಹೆಣವಾಗಿರುವುದು ಇಡೀ ಗ್ರಾಮಸ್ಥರು ಮರಗುತಿದ್ದಾರೆ, ದಂಪತಿಗೆ ಇಬ್ಬರು ಮಕ್ಕಳಿದ್ದು, ತಾಯಿಯನ್ನು ಕಳೆದುಕೊಂಡ ಮಕ್ಕಳ ಬದುಕು ಅತಂತ್ರವಾಗಿದೆ .

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಅಥಣಿ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪತ್ನಿಯ ಹತ್ಯೆಗೈದ ಆರೋಪಿ ಪತಿ ಪರಗೂಂಡ ಸಾರವಾಡನನ್ನು ಪೊಲೀಸರು ಈಗಾಗಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
​ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ತನಿಖೆ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ಪತಿಯ ಸಂಶಯದ ಬುದ್ಧಿಗೆ ಬಡ ಕುಟುಂಬವೊಂದು ಸಂಪೂರ್ಣವಾಗಿ ಬೀದಿಗೆ ಬಿದ್ದಂತಾಗಿದೆ.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img