ಸಂಗೀತ ಜಗತ್ತಿಗೆ ಅಪಾರ ನಷ್ಟ: ಎಸ್. ಜಾನಕಿ ಅಸ್ತಂಗತ..
ಬೆಂಗಳೂರು : ದಕ್ಷಿಣ ಭಾರತದ ಸಂಗೀತ ಜಗತ್ತಿನ ಪ್ರಮುಖ ವ್ಯಕ್ತಿ, “ನೈಟಿಂಗೇಲ್ ಆಫ್ ಸೌತ್ ಇಂಡಿಯಾ” ಎಂದು ಪ್ರೀತಿಯಿಂದ ಕರೆಯಲ್ಪಡುವ ಎಸ್. ಜಾನಕಿ ಅವರು ಇಂದು ಮೈಸೂರಿನಲ್ಲಿ 88 ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ವಯೋಸಹಜ ಕಾರಣಗಳಿಂದ ಅವರು ಮೈಸೂರಿನ ಆಪೋಲೋ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮತ್ತು ವೈದ್ಯಕೀಯ ಮೂಲಗಳು ತಿಳಿಸಿವೆ.
ಶಿಷ್ಟ್ಲ ಜಾನಕಿ ಎಂಬ ಪೂರ್ಣ ಹೆಸರಿನ ಜಾನಕಿ ಅವರು 1948ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಜನಿಸಿದ್ದರು. 1957ರಲ್ಲಿ ತಮಿಳು ಚಿತ್ರದ ಮೂಲಕ ಸಿನಿಮಾ ಸಂಗೀತ ಜಗತ್ತಿಗೆ ಪಾದಾರ್ಪಣೆ ಮಾಡಿದ ಅವರು, ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ೨೦ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48,000ಕ್ಕೂ ಅಧಿಕ ಹಾಡುಗಳನ್ನು ಹಾಡಿ ಖ್ಯಾತಿ ಪಡೆದಿದ್ದರು. ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಹಾಡುಗಳನ್ನು ಹಾಡಿದ ಗಾಯಕಿಯಾಗಿ ಅವರು ಗುರುತಿಸಲ್ಪಟ್ಟಿದ್ದರು.
ಅವರು 4 ರಾಷ್ಟ್ರಪ್ರಶಸ್ತಿ, ೩೩ಕ್ಕೂ ಹೆಚ್ಚು ರಾಜ್ಯ ಪ್ರಶಸ್ತಿಗಳು, ಕಲೈಮಾಮನಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳನ್ನು ಪಡೆದಿದ್ದರು. 2013 ರಲ್ಲಿ ಪದ್ಮ ಭೂಷಣ ಪ್ರಶಸ್ತಿಯನ್ನು ನಿರಾಕರಿಸಿ, ಭಾರತ ರತ್ನಕ್ಕೆ ಅರ್ಹರಾಗಿದ್ದೇನೆ ಎಂದು ಹೇಳಿ ಸುದ್ದಿಯಾಗಿದ್ದರು.ಜಾನಕಿ ಅವರ ನಿಧನದ ಸುದ್ದಿ ತಿಳಿದು ಸಿನಿಮಾ ರಂಗ, ಸಂಗೀತಗಾರರು ಮತ್ತು ಅಭಿಮಾನಿಗಳು ಶೋಕಸಾಗರದಲ್ಲಿ ಮುಳುಗಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಜಾನಕಿ ಅವರ ಪತಿ ವಿ. ರಾಮಪ್ರಸಾದ್ ಅವರು 1997 ರಲ್ಲಿ ನಿಧನರಾಗಿದ್ದರು. ಏಕೈಕ ಮಗ ಮುರಳಿ ಕೃಷ್ಣ ಅವರು ಈ ವರ್ಷದ ಜನವರಿಯಲ್ಲಿ ನಿಧನರಾಗಿದ್ದರು. ಜಾನಕಿ ಅವರು ಮೈಸೂರಿನಲ್ಲಿ ವಾಸಿಸುತ್ತಿದ್ದರು.



