Tuesday, February 10, 2026
29.1 C
Belagavi

ಜಗದೀಶ ಶೆಟ್ಟರ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕೆ. ರಾಮಮೋಹನ ನಾಯ್ಡು ಭೇಟಿ

advertisement

spot_img

ಮಾಜಿ ಮುಖ್ಯಮಂತ್ರಿಗಳು ಬೆಳಗಾವಿಯ ಸಂಸದರು ಆದ ಜಗದೀಶ ಶೆಟ್ಟರ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕೆ. ರಾಮಮೋಹನ ನಾಯ್ಡು ಇವರನ್ನು ಭೇಟಿಯಾಗಿ, ಬೆಳಗಾವಿ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಹಾಗೂ ಪ್ರಮುಖ ನಗರಗಳಿಗೆ ಇಂಡಿಗೋ ಮತ್ತು ಏ‌ರ್ ಇಂಡಿಯಾ ಎಕ್ಸಪ್ರೆಸ್ ಸಂಸ್ಥೆಯ ವತಿಯಿಂದ ವಿಮಾನಯಾನ ಸೇವೆಯನ್ನು ಒದಗಿಸುವ ಬಗ್ಗೆ ಚರ್ಚಿಸಿ, ಮನವಿ ಸಲ್ಲಿಸಿದರು.

ಬೆಳಗಾವಿ ನಗರವು ಎಲ್ಲ ರಂಗದಲ್ಲಿ, ವಿಶೇಷವಾಗಿ ಉದ್ಯಮಿಕರಣ ಕ್ಷೇತ್ರದಲ್ಲಿ ಬಹುವೇಗವಾಗಿ ಬೆಳೆಯುತ್ತಿರುವ ನಗರ. ಬೆಳಗಾವಿ ವಿಮಾನ ನಿಲ್ದಾಣವು ಕೇಂದ್ರ ಸರಕಾರದ ಉಡಾನ ಯೋಜನೆಯಲ್ಲಿ ಆಯ್ಕೆಯಾಗಿ, ತದನಂತರ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಅನೇಕ ನಗರಗಳಿಗೆ ಈ ಮೊದಲು ಒದಗಿಸಲಾಗುತ್ತಿದ್ದ ವಿಮಾನಯಾನ ಸೇವೆಯನ್ನು ಸಂಬಂಧಿತ ಸಂಸ್ಥೆಗಳು ರದ್ದು ಪಡಿಸಿದ್ದು, ಇದರಿಂದಾಗಿ ಉದ್ಯಮದಾರರಿಗೆ ಹಾಗೂ ಇಲ್ಲಿನ ನಿವಾಸಿಗಳಿಗೆ ಸಾಕಷ್ಟು ತೊಂದರೆಯಾಗಿದೆ.

ಈ ನಿಟ್ಟಿನಲ್ಲಿ ಪ್ರಮುಖ ನಗರಗಳಾದ ಮುಂಬೈ, ಚನೈ, ಸುರತ್, ಪುಣೆ ಹೀಗೆ ಹಲವು ನಗರಗಳಿಗೆ ಇಂಡಿಗೋ ಮತ್ತು ಏರ್ ಇಂಡಿಯಾ ಸಂಸ್ಥೆಯಿಂದ ಈ ಮಾರ್ಗದಲ್ಲಿ ವಿಮಾನಯಾನ ಸೇವೆಯನ್ನು ಒದಗಿಸುವ ಬಗ್ಗೆ ಆಯಾ ಸಂಸ್ಥೆಗಳಿಗೆ ಅಗತ್ಯ ನಿರ್ದೇಶನ ನೀಡುವಂತೆ ಕೋರಲಾಯಿತು.

ಅದೆ ರೀತಿಯಾಗಿ 1) ಬೆಳಗಾವಿ, 2) ಹುಬ್ಬಳ್ಳಿ, 3) ಶಿವಮೊಗ್ಗ ಹಾಗೂ 4) ವಿಜಯಪುರ, ವಿಮಾನ ನಿಲ್ದಾಣಗಳನ್ನು ಅನುಕ್ರಮವಾಗಿ 1)ಕಿತ್ತೂರ ರಾಣಿ ಚನ್ನಮ್ಮ ಏರಪೋರ್ಟ, 2)ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಏರಪೋರ್ಟ, 3) ರಾಷ್ಟ್ರಕವಿ ಡಾ: ಕೆ.ವಿ ಪುಟ್ಟಪ್ಪ (ಕುವೆಂಪು) ಏರಪೋರ್ಟ ಹಾಗೂ 4) ಜಗಜ್ಯೋತಿ ಬಸವೇಶ್ವರ ಏರಪೋರ್ಟ ಎಂದು ಮರು ನಾಮಕರಣ ಮಾಡುವ ಕುರಿತಾದ ಪ್ರಸ್ತಾವನೆಯನ್ನು ರಾಜ್ಯ ಸರಕಾರದಿಂದ ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಲಾಗಿದ್ದು, ಶೀಘ್ರ ಅನುಮೋದನೆ ನೀಡುವಂತೆ ನೋಡಿಕೊಳ್ಳುವಂತೆಯೂ ಸಹ ವಿಮಾನಯಾನ ಸಚಿವರಲ್ಲಿ ಕೋರಲಾಯಿತು.

ಪ್ರಸ್ತಾಪಿತ ವಿಷಯವಾಗಿ ಆದಷ್ಟು ಶೀಘ್ರ ಕ್ರಮ ಕೈಕೊಳ್ಳುವುದಾಗಿ ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕೆ. ರಾಮಮೋಹನ ನಾಯ್ಡು ಇವರು ಭರವಸೆಯನ್ನು ನೀಡಿದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img