ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಕೇಸರಿ ಸೇನೆ ಸಹಯೋಗದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಮಾಡಲಾಯಿತು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು ವಹಿಸಿಕೊಂಡಿದ್ದರು . ಬಿಜಾಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ರಾಜ್ಯಸಭಾ ಸದಸ್ಯ ಇರಣ್ಣ ಕಡಾಡಿ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಮಾಜಿ ಶಾಸಕ ಮಹದೇವಪ್ಪ ಯಾದವಾಡ ಇನ್ನು ಅನೇಕರು ಸೇರಿ ಉದ್ಘಾಟನೆ ಮಾಡಿದರು
“ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ನಿಂತಿಲ್ಲ, 2028ರ ಒಳಗೆ ಶೇ. 7ರಷ್ಟು ಮೀಸಲಾತಿ ಪಡೆದೇ ತೀರುತ್ತೇವೆ”, ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶಪಥ ಮಾಡಿದ್ದಾರೆ.ಕುನ್ನಾಳ ಗ್ರಾಮದಲ್ಲಿ ಭಾನುವಾರ ರಾಣಿ ಚನ್ನಮ್ಮ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿ,
‘ಪಂಚಮಸಾಲಿಗರಿಗೆ 20 ಮೀಸಲಾತಿಗಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೋರಾಟ ಮಾಡುತ್ತಿದ್ದಾರೆ. ಆದರೆ, ನಮ್ಮವರೇ ಮೀಸಲಾತಿ ವಿಷಯದಲ್ಲಿ ಬೆನ್ನಿಗೆ ಚೂರಿ ಹಾಕಿದ್ದಾರೆ”, ಎಂದು ಅಸಮಾಧಾನ ಹೊರ ಹಾಕಿದರು.ಸಮಾಜದ ತಾಲೂಕು ಅಧ್ಯಕ್ಷಸಿ. ಬಿ. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಸದೃಢ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಧಾರವಾಡ ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ,ಜಿಪಂ ಮಾಜಿ ಸದಸ್ಯೆ ರೋಹಿಣಿ ಪಾಟೀಲ ಸಮಾಜದ ಸಂಘಟನೆ ಬಗ್ಗೆ ಮಾತನಾಡಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಸ ಪಾಟೀಲ, ತಾಲೂಕು ಅಧ್ಯಕ್ಷ ಡಾ. ಕೆ.ವಿ. ಪಾಟೀಲ, ಪಂಚನಗೌಡ ದ್ಯಾಮನಗೌಡ್ರ, ನಿಂಗಪ್ಪ ಫೀರೋಜಿ, ಆರ್.ವಿ. ಅಶೋಕ, ಪರುತಗೌಡ ಪಾಟೀಲ, ಪಿ.ಎಫ್. ಪಾಟೀಲ ಭೀಮ್ಸಿ ಬಸ್ಸಿಡೋನಿ ಜಿ.ವಿ ನಾಡಗೌಡ್ರು ಕುನ್ನಾಳ ಹಾಗೂ ಸುತ್ತಮುತ್ತಲಿನ ಗ್ರಾಮದ ನಾಗರಿಕರು ಉಪಸ್ಥಿತರಿದ್ದರು.