ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಲಾಡ್ ಗಂಭೀರ ಆರೋಪ
ಬಿಜೆಪಿ ವಿರುದ್ಧ ಸಂತೋಷ ಲಾಡ್ ವಾಗ್ದಾಳಿ: ಅಭಿವೃದ್ಧಿ, ಆರ್ಥಿಕತೆ ಕುರಿತ ಪ್ರಶ್ನೆಗಳು
ಬಾಗಲಕೋಟೆ: ಕೇಂದ್ರ ಸರ್ಕಾರದ ನೀತಿಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಆರ್ಥಿಕ ನಿರ್ವಹಣೆ ಕುರಿತು ಸಚಿವ ಸಂತೋಷ ಲಾಡ್ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಸಂಗ್ರಹಣೆಯಿಂದ ಹಿಡಿದು beef export ವರೆಗೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರದ ನಿಲುವುಗಳನ್ನು ಪ್ರಶ್ನಿಸಿದರು.
ದೆಶದಲ್ಲಿ ತೈಲ ಸಂಗ್ರಹಣಾ ಸಾಮರ್ಥ್ಯವನ್ನು ವೃದ್ಧಿಪಡಿಸುವ ಕೆಲಸವನ್ನು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಮಾಡಲಾಗಿದೆ ಎಂದು ಹೇಳಿದರು. ವಿಶಾಖಪಟ್ಟಣಂ, ಮಂಗಳೂರು, ಪಡುರ್ ಪ್ರದೇಶಗಳಲ್ಲಿ ನಿರ್ಮಿಸಿದ ಸಂಗ್ರಹಣಾ ವ್ಯವಸ್ಥೆಯಿಂದ ಇಂದಿಗೂ ಜನರಿಗೆ ಅನುಕೂಲವಾಗುತ್ತಿದೆ ಎಂದರು.
ಬಿಜೆಪಿ ಗೋಮಾತೆ ವಿಚಾರವನ್ನು ಚುನಾವಣಾ ಸಂದರ್ಭದಲ್ಲಿ ಮಾತ್ರ ಪ್ರಸ್ತಾಪಿಸುತ್ತದೆ ಎಂದು ಆರೋಪಿಸಿದ ಲಾಡ್, ಭಾರತವು ವಿಶ್ವದಲ್ಲಿ beef export ನಲ್ಲಿ ಎರಡನೇ ಸ್ಥಾನದಲ್ಲಿರುವುದನ್ನು ಪ್ರಶ್ನಿಸಿದರು. “ಗೋರಕ್ಷಣೆಯ ಮಾತು ಮಾಡುವವರು ಈ ವೈಷಮ್ಯಕ್ಕೆ ಉತ್ತರ ನೀಡಬೇಕು” ಎಂದು ಹೇಳಿದರು.
ಮುಂದುವರಿದು, ಕೇಂದ್ರ ಸರ್ಕಾರದ ಮೇಲೆ ಆರ್ಥಿಕ ಅಸಮಾನತೆ ಹೆಚ್ಚಿಸುವ ಆರೋಪ ಮಾಡಿದರು. ದೊಡ್ಡ ಉದ್ಯಮಿಗಳಿಗೆ ಮಾತ್ರ ಲಾಭವಾಗುವಂತೆ ನೀತಿಗಳು ರೂಪಿಸಲಾಗುತ್ತಿವೆ ಎಂದು ಟೀಕಿಸಿದರು. ವಿಶೇಷವಾಗಿ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರಿಗೆ ಸರ್ಕಾರ ಅನುಕೂಲ ಮಾಡಿಕೊಡುತ್ತಿದೆ ಎಂದು ದೂರಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸಾರ್ವಜನಿಕ ವಲಯದ ಸಂಸ್ಥೆಗಳ ಸ್ಥಾಪನೆ ಕಡಿಮೆಯಾಗಿದೆ ಎಂದು ಅವರು ಹೇಳಿದರು. ಹಿಂದಿನ ಸರ್ಕಾರಗಳು ಹಲವು ಪಿಎಸ್ಯು ಸಂಸ್ಥೆಗಳನ್ನು ಸ್ಥಾಪಿಸಿದ್ದರೆ, ಪ್ರಸ್ತುತ ಸರ್ಕಾರ ಅದರಲ್ಲಿ ಹಿಂದೆಬಿದ್ದಿದೆ ಎಂದು ಅಭಿಪ್ರಾಯಪಟ್ಟರು.
“Make in India” ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಫಲಿತಾಂಶ ನೀಡಿಲ್ಲ. ಚೀನಾದೊಂದಿಗೆ ವ್ಯಾಪಾರ ಅಂತರ ಹೆಚ್ಚಾಗಿದೆ. ದೇಶೀಯ ಉತ್ಪಾದನೆ ಹೆಚ್ಚಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಅದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕಡಿಮೆಯಾಗುತ್ತಿದೆ ಎಂದು ಅವರು ಹೇಳಿದರು. ಸರ್ಕಾರದ ವಿರುದ್ಧ ಮಾತನಾಡಿದರೆ ವಿಷಯಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ದೇಶದ ಅಭಿವೃದ್ಧಿ, ಆರ್ಥಿಕ ಸಮತೋಲನ ಹಾಗೂ ಜನರ ಜೀವನಮಟ್ಟವನ್ನು ಸುಧಾರಿಸುವ ವಿಷಯದಲ್ಲಿ ಗಂಭೀರ ಚರ್ಚೆ ಅಗತ್ಯವಿದೆ ಎಂದು ಸಂತೋಷ ಲಾಡ್ ಅಭಿಪ್ರಾಯಪಟ್ಟರು.



