Friday, July 17, 2026
23.9 C
Belagavi

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಲಾಡ್ ಗಂಭೀರ ಆರೋಪ

advertisement

spot_img

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಲಾಡ್ ಗಂಭೀರ ಆರೋಪ

ಬಿಜೆಪಿ ವಿರುದ್ಧ ಸಂತೋಷ ಲಾಡ್ ವಾಗ್ದಾಳಿ: ಅಭಿವೃದ್ಧಿ, ಆರ್ಥಿಕತೆ ಕುರಿತ ಪ್ರಶ್ನೆಗಳು

ಬಾಗಲಕೋಟೆ: ಕೇಂದ್ರ ಸರ್ಕಾರದ ನೀತಿಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಆರ್ಥಿಕ ನಿರ್ವಹಣೆ ಕುರಿತು ಸಚಿವ ಸಂತೋಷ ಲಾಡ್ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಧನ ಸಂಗ್ರಹಣೆಯಿಂದ ಹಿಡಿದು beef export ವರೆಗೆ ಹಲವು ವಿಷಯಗಳಲ್ಲಿ ಕೇಂದ್ರ ಸರ್ಕಾರದ ನಿಲುವುಗಳನ್ನು ಪ್ರಶ್ನಿಸಿದರು.
ದೆಶದಲ್ಲಿ ತೈಲ ಸಂಗ್ರಹಣಾ ಸಾಮರ್ಥ್ಯವನ್ನು ವೃದ್ಧಿಪಡಿಸುವ ಕೆಲಸವನ್ನು ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಮಾಡಲಾಗಿದೆ ಎಂದು ಹೇಳಿದರು. ವಿಶಾಖಪಟ್ಟಣಂ, ಮಂಗಳೂರು, ಪಡುರ್ ಪ್ರದೇಶಗಳಲ್ಲಿ ನಿರ್ಮಿಸಿದ ಸಂಗ್ರಹಣಾ ವ್ಯವಸ್ಥೆಯಿಂದ ಇಂದಿಗೂ ಜನರಿಗೆ ಅನುಕೂಲವಾಗುತ್ತಿದೆ ಎಂದರು.
ಬಿಜೆಪಿ ಗೋಮಾತೆ ವಿಚಾರವನ್ನು ಚುನಾವಣಾ ಸಂದರ್ಭದಲ್ಲಿ ಮಾತ್ರ ಪ್ರಸ್ತಾಪಿಸುತ್ತದೆ ಎಂದು ಆರೋಪಿಸಿದ ಲಾಡ್, ಭಾರತವು ವಿಶ್ವದಲ್ಲಿ beef export ನಲ್ಲಿ ಎರಡನೇ ಸ್ಥಾನದಲ್ಲಿರುವುದನ್ನು ಪ್ರಶ್ನಿಸಿದರು. “ಗೋರಕ್ಷಣೆಯ ಮಾತು ಮಾಡುವವರು ಈ ವೈಷಮ್ಯಕ್ಕೆ ಉತ್ತರ ನೀಡಬೇಕು” ಎಂದು ಹೇಳಿದರು.ಮುಂದುವರಿದು, ಕೇಂದ್ರ ಸರ್ಕಾರದ ಮೇಲೆ ಆರ್ಥಿಕ ಅಸಮಾನತೆ ಹೆಚ್ಚಿಸುವ ಆರೋಪ ಮಾಡಿದರು. ದೊಡ್ಡ ಉದ್ಯಮಿಗಳಿಗೆ ಮಾತ್ರ ಲಾಭವಾಗುವಂತೆ ನೀತಿಗಳು ರೂಪಿಸಲಾಗುತ್ತಿವೆ ಎಂದು ಟೀಕಿಸಿದರು. ವಿಶೇಷವಾಗಿ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿ ಅವರಿಗೆ ಸರ್ಕಾರ ಅನುಕೂಲ ಮಾಡಿಕೊಡುತ್ತಿದೆ ಎಂದು ದೂರಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಸಾರ್ವಜನಿಕ ವಲಯದ ಸಂಸ್ಥೆಗಳ ಸ್ಥಾಪನೆ ಕಡಿಮೆಯಾಗಿದೆ ಎಂದು ಅವರು ಹೇಳಿದರು. ಹಿಂದಿನ ಸರ್ಕಾರಗಳು ಹಲವು ಪಿಎಸ್‌ಯು ಸಂಸ್ಥೆಗಳನ್ನು ಸ್ಥಾಪಿಸಿದ್ದರೆ, ಪ್ರಸ್ತುತ ಸರ್ಕಾರ ಅದರಲ್ಲಿ ಹಿಂದೆಬಿದ್ದಿದೆ ಎಂದು ಅಭಿಪ್ರಾಯಪಟ್ಟರು.
“Make in India” ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಫಲಿತಾಂಶ ನೀಡಿಲ್ಲ. ಚೀನಾದೊಂದಿಗೆ ವ್ಯಾಪಾರ ಅಂತರ ಹೆಚ್ಚಾಗಿದೆ. ದೇಶೀಯ ಉತ್ಪಾದನೆ ಹೆಚ್ಚಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಅದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕಡಿಮೆಯಾಗುತ್ತಿದೆ ಎಂದು ಅವರು ಹೇಳಿದರು. ಸರ್ಕಾರದ ವಿರುದ್ಧ ಮಾತನಾಡಿದರೆ ವಿಷಯಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ದೇಶದ ಅಭಿವೃದ್ಧಿ, ಆರ್ಥಿಕ ಸಮತೋಲನ ಹಾಗೂ ಜನರ ಜೀವನಮಟ್ಟವನ್ನು ಸುಧಾರಿಸುವ ವಿಷಯದಲ್ಲಿ ಗಂಭೀರ ಚರ್ಚೆ ಅಗತ್ಯವಿದೆ ಎಂದು ಸಂತೋಷ ಲಾಡ್ ಅಭಿಪ್ರಾಯಪಟ್ಟರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img