Friday, July 17, 2026
23.9 C
Belagavi

ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ: ಕೆವಿಪಿ

advertisement

spot_img

ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ: ಕೆವಿಪಿ

ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ: ಕೆವಿಪಿ

ಕೋಲಾರ : ಓದಿನ‌ ಜೊತೆಗೆ ನೈತಿಕ ಮೌಲ್ಯಗಳೂ ಬೆಳೆಯಲಿ.
ವೃದ್ದಾಶ್ರಮಗಳು ಇಲ್ಲದ ಸಮಾಜ ನಮ್ಮ ಆದ್ಯತೆಯಾಗಲಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.

ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿ ಪೋಷಕರಿಗೆ ಸ್ಫೂರ್ತಿಯ ಮಾತುಗಳನ್ನಾಡಿದರು.

ಪಠ್ಯದ ಜೊತೆಗೆ ಜೀವನ‌ ಪಾಠ ಕೂಡ ಬಹಳ ಮುಖ್ಯ. ಮೊದಲೆಲ್ಲಾ ಮದುವೆ ಅಂದ್ರೆ ಊರಿಗೆ ಊರೇ ಆ ಸಂಭ್ರಮದಲ್ಲಿ ಭಾಗಿ ಆಗುತ್ತಿದ್ದರು. ಪರಸ್ಪರ ಬಾಂಧವ್ಯ ಬಳೆಯುತ್ತಿತ್ತು. ಈಗ ಬಾಂಧವ್ಯ ಬೆಸೆಯುವುದಿರಲಿ ಓದಿ ಬೆಳೆದ ಮಕ್ಕಳಿಗೆ ತಂದೆ ತಾಯಿಯೇ ಹೊರೆ ಆಗ್ತಿದಾರೆ. ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದು ಈ ಕಾರಣಕ್ಕೇ ಎಂದು ಬೇಸರ ವ್ಯಕ್ತಪಡಿಸಿದರು.

ಮಕ್ಕಳು ಬೀದಿ ಪಾಲು ಆಗದ ಹಾಗೆ ಪೋಷಕರು ಹೊಟ್ಟೆ ಬಟ್ಟೆ ಕಟ್ಟಿ ಸಾಕ್ತಾರೆ. ಆದರೆ ಬೆಳೆದ ಮಕ್ಕಳು ವಯಸ್ಸಾದ ಪೋಷಕರನ್ನು ಮರೆತು ಬೀದಿಪಾಲು ಮಾಡುತ್ತಿದ್ದಾರೆ. ಒಂದೇ ಮನೆಯಲ್ಲಿದ್ದರೂ ಅಕ್ಕ ಪಕ್ಕದ ಕೋಣೆಗಳಲ್ಲಿ ಬಂದ್ ಆಗುವ ಮಕ್ಕಳು ಊಟ, ತಿಂಡಿ, ಸುಖ, ದುಃಖ ಎಲ್ಲವನ್ನೂ ವಾಟ್ಸಾಪ್ ಮೂಲಕವೇ ಮೆಸ್ಸೇಜ್ ಹಾಕಿ ಮಲಗುತ್ತಾರೆ. ಇರಿಂದ ಬಾಂಧವ್ಯ ಮತ್ತು ಪರಸ್ಪರತೆ ಬೆಳೆಯುವುದಿಲ್ಲ ಎಂದರು.

ಇಂದು ತಂತ್ರಜ್ಞಾನ ವಿಪರೀತ ಬೆಳೆದಿದೆ. ಕೃತಕ ಬುದ್ದಿಮತ್ತೆಯ ಅನಾಹುತಗಳನ್ನು ನಾವು ನೋಡುತ್ತಿದ್ದೇವೆ. ಇದಕ್ಕೆ ಆಸ್ಪದ ಕೊಡದೆ ತಳ ಮಟ್ಟದ ನೈತಿಕ ಶಿಕ್ಷಣ ಆದ್ಯತೆ ಆಗಲಿ ಎಂದು ಹಾರೈಸಿದರು.

ರಾಕ್ ವ್ಯಾಲಿ ಇಂಟರ್ ನ್ಯಾಷನಲ್ ಶಾಲೆ ಇಪ್ಪತ್ತು ವರ್ಷಗಳನ್ನು ಪೂರೈಸಿರುವುದು ಬಹಳ ಸಂತೋಷದ ವಿಷಯ. ಶಾಲೆಗಳನ್ನು ಕಟ್ಟಿ ಬೆಳೆಸುವುದು ಸಾಮಾನ್ಯ ಸಂಗತಿ ಅಲ್ಲ. ಅಸಾಧ್ಯ ಶಿಸ್ತು ಅಗತ್ಯ ಎಂದರು.

ಮಹಿಳಾ ಸೇವಾ ಶೈಕ್ಷಣಿಕ ಟ್ರಸ್ಟ್ ನ ಮುಖ್ಯಸ್ಥರಾದ ರೂಪ ಪಿಳ್ಳಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಕ್ ವ್ಯಾಲಿ ಶಾಲೆಯ ಮುಖ್ಯಸ್ಥರಾದ ಪಿಳ್ಳಪ್ಪ, ನಾಲೆಡ್ಜ್ ಅಕಾಡೆಮಿಯ ಡಾ.ಲೋಕೇಶ್ ಪೂಲ, ವಸತಿ ಸಚಿವರ ಮಾಧ್ಯಮ ಸಂಯೋಜಕರಾದ ಲಕ್ಷ್ಮೀನಾರಾಯಣ್ ಅವರು ಮುಖ್ಯ ಅತಿಥಿಗಳಾಗಿದ್ದರು.

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img