Saturday, April 11, 2026
28.1 C
Belagavi

ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

advertisement

spot_img

*ಗ್ಯಾರಂಟಿ ಯೋಜನೆ ಹಿಂಪಡೆಯುವ ಬಗ್ಗೆ ಬಿಜೆಪಿಯಿಂದ ಅಧಿಕೃತ ನಿರ್ಣಯ ಮಂಡಿಸಿ, ಚರ್ಚಿಸೋಣ: ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು*

*ಬೆಂಗಳೂರು, ಮಾ.13:*

“ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಿರಿ, ಮರುಪರಿಶೀಲನೆ ಮಾಡಿ ಎಂದು ಬಿಜೆಪಿಯಿಂದ ಅಧಿಕೃತ ತೀರ್ಮಾನ ಮಾಡಿ ಸದನದಲ್ಲಿ ನಿರ್ಣಯ ಮಂಡಿಸಿ, ಆನಂತರ ಜನರ ಮುಂದೆ ಸದನದಲ್ಲಿ ಇದರ ಬಗ್ಗೆ ಚರ್ಚೆ ನಡೆಸೋಣ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲೆಸೆದರು.

ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಕುರಿತು ಚರ್ಚೆ ವೇಳೆ ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬೇಕು ಎಂದು ಹೇಳಿದಾಗ, ಶಿವಕುಮಾರ್ ಅವರು ತಿರುಗೇಟು ನೀಡಿದರು.

“ಸುರೇಶ್ ಅವರೇ ನೀವು ಹಿರಿಯ ನಾಯಕರಿದ್ದೀರಿ, ಮಾಜಿ ನಿಮ್ಮ ಜತೆ ಮಾಜಿ ಡಿಸಿಎಂ ಇದ್ದಾರೆ. ಈ ಅಭಿಪ್ರಾಯ ಕೇವಲ ನಿಮ್ಮ ವೈಯಕ್ತಿಕವಲ್ಲ. ಅದು ಪಕ್ಷದ ಅಭಿಪ್ರಾಯ. ನೀವು ಏನು ಹೇಳುವಿರೋ ಅದರ ಬಗ್ಗೆ ಚಿಂತನೆ ನಡೆಸೋಣ. ನೀವು ಹೇಳುತ್ತಿರುವುದು ಸರಿಯಿಲ್ಲ ಎಂದು ಹೇಳುತ್ತಿಲ್ಲ. ಈ ಬಜೆಟ್ ಅಧಿವೇಶನದ ಒಳಗೆಯೇ ನಿಮ್ಮ ತೀರ್ಮಾನ ತಿಳಿಸಿ” ಎಂದು ಹೇಳಿದರು.

ಕೋಳಿ ಕೇಳಿ ಖಾರ ಅರೆದಂತಿದೆ, ಗ್ಯಾರಂಟಿ ಕೊಡುವಾಗ ನಮ್ಮನ್ನು ನೀವು ಕೇಳಿದ್ರ ಎಂದು ಸುರೇಶ್ ಅವರು ಪ್ರತಿಕ್ರಿಯೆ ನೀಡಿದಾಗ, “ಯಡಿಯೂರಪ್ಪ ಅವರು ಒಂದು ಕಾಳು ಕಡಿಮೆ ಆದರೂ ಬಿಡುವುದಿಲ್ಲ ಎಂದು ಹೇಳಿದ್ದರು. ಆನಂತರ ಅದು ಕಡಿಮೆ ಆಯಿತು, ಇದು ಕಡಿಮೆ ಆಯಿತು ಎಂದವರು ನೀವು. ಅದಕ್ಕೆ ಆರು ತಿಂಗಳಲ್ಲಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆವು. ನಿಮ್ಮ ಮಾತನ್ನೂ ಕೇಳಿ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ” ಎಂದು ತಿರುಗೇಟು ನೀಡಿದರು.

“ಇತ್ತೀಚೆಗೆ ಅಸ್ಸಾಂ ರಾಜ್ಯಕ್ಕೆ ಹೋಗಿದ್ದೆ. ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಮಾತ್ರ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಇಲ್ಲ. ಈಗ ಚಾಟ್ ಜಿಪಿಟಿಯಲ್ಲಿ ಹೌ ಟು ವಿನ್ ಗುಜರಾತ್ ಎಲೆಕ್ಷನ್ ಎಂದು ಹಾಕು, ಕರ್ನಾಟಕ ಮಾದರಿ ಅನುಸರಿಸಿ ಎಂದು ಬರಲಿಲ್ಲ ಎಂದರೆ ಕೇಳಿ. ಸರ್ಕಾರಿ ಅಧಿಕಾರಿಗಳಿಗೆ, ಉಳ್ಳವರಿಗೆ ಗ್ಯಾರಂಟಿ ಯೋಜನೆಗಳು ಬೇಕಿಲ್ಲ. ನಾವು ಒಂದು ತೀರ್ಮಾನ ಮಾಡಿದ್ದೇವೆ. ಅದೇ ರೀತಿ ನೀವು ಒಂದು ತೀರ್ಮಾನಕ್ಕೆ ಬನ್ನಿ” ಎಂದರು.

ಮರುಚಿಂತನೆ ಮಾಡಿ ಎಂದು ಮುಖ್ಯಮಂತ್ರಿಯವರಿಗೆ ಹೇಳಿದ್ದೇ ಎಂದು ಸುರೇಶ್ ಗೌಡ ಅವರು ಹೇಳಿದಾಗ, “ಪಕ್ಕದಲ್ಲಿ, ಡಿನ್ನರ್ ಮೀಟಿಂಗ್, ಡೇ ಲೈಟ್ ಮೀಟಿಂಗ್ ಅಲ್ಲಿ, ಬೇರೆ, ಬೇರೆ ಮೀಟಿಂಗ್ ಅಲ್ಲಿ ಹೇಳಿರುವುದು ಬೇಡ. ನಿಮ್ಮ ತೀರ್ಮಾನವನ್ನ ವಿಧಾನಸಭೆ, ಜನ, ದೇಶ ನೋಡಬೇಕು” ಎಂದರು.

*ನನ್ನ ಬಗ್ಗೆ ಮಾತನಾಡದಿದ್ದರೆ ಬಿಜೆಪಿ ಸ್ನೇಹಿತರಿಗೆ ನಿದ್ದೆ, ಸ್ಫೂರ್ತಿ ಬರುವುದಿಲ್ಲ:*

ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಒಬ್ಬರ ಮುಖ ಮತ್ತೊಬ್ಬರು ನೋಡುವುದಿಲ್ಲ ಎಂದು ಹೇಳಿದಾಗ ಎದ್ದು ಮಾತನಾಡಿದ ಶಿವಕುಮಾರ್ ಅವರು, “ಬಿಜೆಪಿಯಲ್ಲಿರುವ ನನ್ನ ಕೆಲವು ಸ್ನೇಹಿತರಿಗೆ ನನ್ನನ್ನು ಸ್ಮರಿಸದಿದ್ದರೆ ಅವರಿಗೆ ಸಮಾಧಾನವಿಲ್ಲ, ನಿದ್ದೆ ಬರುವುದಿಲ್ಲ, ಸಂತೋಷ ಆಗುವುದಿಲ್ಲ, ಸ್ಫೂರ್ತಿ ಬರುವುದಿಲ್ಲ. ಹೀಗಾಗಿ ನನ್ನ ಸದಾ ನೆನಪಿಸಿಕೊಳ್ಳುತ್ತಿರುತ್ತಾರೆ. ಅವರಿಗೆ ಬಜೆಟ್ ವಿರುದ್ಧವಾಗಿ ಮಾತನಾಡಲು ಏನು ಇಲ್ಲದ ಕಾರಣ ನನ್ನ ವಿಚಾರ ಎತ್ತಿ ಮಾತನಾಡುತ್ತಾರೆ. ಮಾತನಾಡಲಿ, ಖುಷಿಪಡಲಿ. ಧೈರ್ಯವಿರುವ ಒಬ್ಬ ವ್ಯಕ್ತಿ ಬಹುಮತ ತರಬಲ್ಲ ಎದು ನಂಬಿರುವವನು ನಾನು” ಎಂದು ತಿಳಿಸಿದರು.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img