Wednesday, June 10, 2026
24.1 C
Belagavi

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿ.ಕೆ.ಶಿವಕುಮಾರ್

advertisement

spot_img

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿ.ಕೆ.ಶಿವಕುಮಾರ್

ಭೂಮಿ ಮಾರಬೇಡಿ- ವ್ಯವಸಾಯ ಬಿಡಬೇಡಿ ಸಿಎಂ ಕಿವಿಮಾತು

ಕನಕಪುರ, 

“ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್‌ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ” – ಹೀಗೆ ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಸಿಎಂ ಡಿ.ಕೆ.ಶಿವಕುಮಾರ್ ಅವರು ನೀಡಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.

“ನನ್ನ ಕ್ಷೇತ್ರದ ಜನರಿಗೆ ನನ್ನ ಮನೆ ಬಾಗಿಲು ಸದಾ ತೆರೆದಿರುತ್ತದೆ. ನಾನು ನಿಮ್ಮ ಸೇವೆಗೆ ಇರುವವನು. ನಿಮ್ಮ ಆಶೀರ್ವಾದದಿಂದ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದೇ‌‌ನೆ. ನನ್ನ ಕ್ಷೇತ್ರಕ್ಕೆ ಕಾಲಿಟ್ಟ ಕ್ಷಣದಿಂದ ನಾನು ಜನರ ಸೇವಕ. ಜಿಲ್ಲಾ ಪಂಚಾಯತಿ, ಟಿಎಪಿಸಿಎಂಎಸ್ ಮೂಲಕ ನನ್ನ ರಾಜಕೀಯ ಪ್ರಾರಂಭ ಮಾಡಿದೆ. ಪಕ್ಷಬೇಧ ಮರೆತು ನನ್ನನ್ನು ಬೆಳೆಸಿದ್ದೀರಿ” ಎಂದರು.

ಮೆಡಿಕಲ್ ಕಾಲೇಜು ನನ್ನ ಕನಸಾಗಿತ್ತು

ತುಂಗಣಿ ಗ್ರಾಮದಲ್ಲಿ ಮಾತನಾಡಿದ ಅವರು, “ಅಕ್ಷರ, ಆಶ್ರಯ, ಆರೋಗ್ಯ ಹುಡುಕಿಕೊಂಡು ವಲಸೆ ಹೋಗಬೇಡಿ. ಅದೆಲ್ಲವೂ ಇಲ್ಲಿಯೇ ದೊರೆಯಲಿದೆ. ಕನಕಪುರದಲ್ಲಿ ದೊಡ್ಡ ಮೆಡಿಕಲ್ ಕಾಲೇಜು ಆಗಬೇಕು ಎನ್ನುವುದು ನನ್ನ ಕನಸಾಗಿತ್ತು. ಇಡೀ ರಾಜ್ಯದಲ್ಲಿ ತಾಲ್ಲೂಕು ಮಟ್ಟದಲ್ಲಿ ಮೆಡಿಕಲ್ ಕಾಲೇಜು ಇದ್ದರೆ ಅದು ಈ ಕ್ಷೇತ್ರದಲ್ಲಿ ಮಾತ್ರ. ಯಡಿಯೂರಪ್ಪ ಅವರು ನಮಗೆ ಘೋಷಣೆಯಾಗಿದ್ದ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ನೀಡಿದ್ದರು. ನಾನು ಛಲಬಿಡದೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ತಂದಿದ್ದೇನೆ” ಎಂದರು.ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ

“ಕ್ಷೇತ್ರದಲ್ಲಿನ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸಲಾಗುವುದು.‌ ನನ್ನ ಕ್ಷೇತ್ರದ ಜನ ವಲಸೆ ಹೋಗುವುದನ್ನು ತಪ್ಪಿಸಲು ಕೆಲಸ ಮಾಡಲಾಗುತ್ತಿದೆ. ದೊಡ್ಡಆಲಳ್ಳಿ, ಹೊಸದುರ್ಗಗಳಲ್ಲಿ ಸಿಎಸ್ ಆರ್ ಅನುದಾನ ಬಳಸಿ ಕೆಪಿಎಸ್ ಶಾಲೆಗಳನ್ನು ನಿರ್ಮಾಣ ಮಾಡಲಾಗಿದೆ. ಬೆಂಗಳೂರಿನಲ್ಲಿ ದೊರೆಯುವ ಶಿಕ್ಷಣ ಇಲ್ಲಿಯೇ ದೊರೆಯಬೇಕು. ನಿಮಗೆ ಆಶ್ರಯ, ಆರೋಗ್ಯ, ಅಕ್ಷರ ನೀಡುವುದು ನನ್ನ ಮೊದಲ ಆದ್ಯತೆ.‌ ಇದೇ ವೇಳೆ ಭೂಮಿ ಮಾರಬೇಡಿ- ವ್ಯವಸಾಯ ಬಿಡಬೇಡಿ” ಎಂದು ಕಿವಿಮಾತು ಹೇಳಿದರು.

Hot this week

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ ಮುಖಂಡರ ಆಗ್ರಹ

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ...

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ...

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದುರಂತ...

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ...

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿ.ಕೆ. ಶಿವಕುಮಾರ್

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ...

Topics

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ ಮುಖಂಡರ ಆಗ್ರಹ

ಹಿರಿಯ ದಲಿತ ನಾಯಕ ಆರ್.ಬಿ. ತಿಮ್ಮಾಪುರಗೆ ಸಚಿವ ಸ್ಥಾನ ನೀಡಲು ಅಥಣಿಯಲ್ಲಿ...

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ

ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಬಿರುಕು ಸೃಷ್ಟಿಸಲು ಕಾಂಗ್ರೆಸ್ ಷಡ್ಯಂತ್ರ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ...

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ವಿಶಾಖಪಟ್ಟಣ ಉಕ್ಕು ಕಾರ್ಖಾನೆಯಲ್ಲಿ ಅವಘಡ ಸ್ವತಂತ್ರ ತನಿಖೆಗೆ ಆದೇಶಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದುರಂತ...

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ಚದುರಂಗದ ಆಟದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳುವುದಿಲ್ಲ: ಸಿಎಂ...

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿ.ಕೆ. ಶಿವಕುಮಾರ್

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ...

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ

ಬಿಜೆಪಿ, ಜೆಡಿಎಸ್ ನಿಂದ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ನನ್ನ...

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ ಹರಿದ ಅಭಿಮಾನದ ಹೊಳೆ

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ...

ವಿಶ್ವಕರ್ಮರಿಂದ ಮಾತ್ರ ದೇಶ ಕಟ್ಟಲು ಸಾಧ್ಯ:ಬಸವರಾಜ ಬೊಮ್ಮಾಯಿ

ವಿಶ್ವಕರ್ಮರಿಂದ ಮಾತ್ರ ದೇಶ ಕಟ್ಟಲು ಸಾಧ್ಯ:ಬಸವರಾಜ ಬೊಮ್ಮಾಯಿ ವಿಶ್ವಕರ್ಮರಿಗೆ ಗೌರವ, ಮನ್ನಣೆ ಸಿಗುವ...
spot_img

Related Articles

Popular Categories

spot_img