ಸ್ವಗ್ರಾಮದಲ್ಲಿ ಎಸ್ಐಆರ್ ಫಾರಂ ಭರ್ತಿ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಉಮೇಶ್ ಮೇಟಿ
ಬಾಗಲಕೋಟ ವಿಧಾನಸಭಾ ಕ್ಷೇತ್ರದ ಶಾಸಕ ಅವರು ಇಂದು ತಮ್ಮ ಸ್ವಗ್ರಾಮದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಭಿಯಾನದ ಅಂಗವಾಗಿ ಎಸ್ಐಆರ್ ಫಾರಂ ಭರ್ತಿ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿರುವುದನ್ನು ಖಚಿತಪಡಿಸಿಕೊಂಡು ಎಸ್ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಜನರು ಯಾವುದೇ ಗೊಂದಲಕ್ಕೆ ಒಳಗಾಗದೆ ಅಗತ್ಯ ದಾಖಲೆಗಳೊಂದಿಗೆ ಫಾರಂ ಭರ್ತಿ ಮಾಡಿ ತಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳುವಂತೆ ಮನವಿ ಮಾಡಿದರು.



