ಅನಂತ ಸುಬ್ಬರಾವ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ
ಬೆಂಗಳೂರು: ಕಾರ್ಮಿಕ ಮುಖಂಡ ಎಚ್. ವಿ. ಅನಂತ ಸುಬ್ಬರಾವ್ ಅವರು ಹೃದಯಾಘಾತದಿಂದ ನಿಧನ ಹೊಂದಿರುವ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಸುಮಾರು ನಾಲ್ಕು ದಶಕಗಳ ಕಾಲ ಕಾರ್ಮಿಕರ ಪರವಾಗಿ ನಿರಂತವಾಗಿ ಹೋರಾಟ ನಡೆಸಿದ್ದ ಅವರು ಕಾರ್ಮಿಕರಿಗೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅವರ ಅಗಲಿಕೆಯಿಂದ ರಾಜ್ಯ ಒಬ್ಬ ಪ್ರಾಮಾಣಿಕ ಹೋರಾಟಗಾರನನ್ನು ಕಳೆದುಕೊಂಡಂತಾಗಿದೆ. ಅವರ ನಿಧನ ಕಾರ್ಮಿಕ ಸಂಘಟನೆಗಳಿಗೆ ತುಂಬಲಾರದ ನಷ್ಟ ಉಂಟುಮಾಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.



