ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ
ಬೆಂಗಳೂರು: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನ ಹೊಂದಿರುವ ಸುದ್ದಿ ಅತ್ಯಂತ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಮಹಾರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ ಆಡಳಿತ ಬೆಂಬಲಿಸಿ, ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆಯಿಂದ ಮಹಾರಾಷ್ಟ್ರ ರಾಜಕಾರಣ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಚಿರ ಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.



