ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ ಸದೃಢರಾಗಬೇಕೆನ್ನುವ ಉದ್ದೇಶದಿಂದ ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಹಿಳೆಯರ ಕುಂದುಕೊರತೆ ಸಭೆ ನಡೆಸಲಾಯಿತು.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು:
* MBK, LCRP, ಕೃಷಿ ಸಖಿ ಮತ್ತು ಪಶು ಸಖಿಯರ ಮೂಲಕ ಸರ್ಕಾರದ ಯೋಜನೆಗಳನ್ನು ಮನೆಮನೆಗೆ ತಲುಪಿಸುವುದು.
* ಪ್ರತಿ ಕುಟುಂಬಕ್ಕೂ ಸರ್ಕಾರದ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳುವುದು.
* ಪ್ರಗತಿಯ ಪರಿಶೀಲನೆಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸುವುದು.
ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಯಶವಂತ್, ಕಾಡಾ ಅಧ್ಯಕ್ಷರಾದ ಯುವರಾಜಣ್ಣ ಕದಂ, ಗ್ರಾಮೀಣ ಮುಖಂಡರಾದ ಮನೋಹರ್ ಬಾಂಡಗಿ, ಬಾಳು ದೇಸೂರಕರ್, ಸಿ.ಸಿ.ಪಾಟೀಲ, ಪಶು ಹಾಗೂ ಕೃಷಿ ಸಖಿಯರು ಉಪಸ್ಥಿತರಿದ್ದರು.



