Friday, July 17, 2026
21 C
Belagavi

ಕಲಹಾಳ ಪ್ರೌಢಶಾಲಾ ಅವರಣವನ್ನು ತೆರವುಗೊಳಿಸುವಂತೆ ಶಾಂತಿಯುತ ಪ್ರತಿಭಟನೆ.

advertisement

spot_img

ಕಲಹಾಳ ಗ್ರಾಮದ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಕಳೆದ ಸುಮಾರು ಎರಡು ದಶಕಗಳಿಂದ ವಾಸವಾಗಿರುವ ಹತ್ತು ದಲಿತ ಕುಟುಂಬಗಳ ಮನೆಗಳನ್ನು ತೆರವುಗೊಳಿಸಿ ಅವರಿಗೆ ಪರ್ಯಾಯ ವಸತಿ ಕಲ್ಪಿಸಿ ವಿದ್ಯಾರ್ಥಿಗಳ ಆಟ ಮತ್ತು ಪಾಠಗಳಿಗೆ ತೊಂದರೆ ಆಗದಂತೆ ಕಲಹಾಳ ಪ್ರೌಢಶಾಲಾ ಎಸ್.ಡಿ.ಎಂ.ಸಿ ಸದಸ್ಯರು , ಗ್ರಾಮಪಂಚಾಯತ ಸದಸ್ಯರುಗಳು , ದಲಿತರು ಸೇರಿದಂತೆ ಗ್ರಾಮದ ಗುರು-ಹಿರಿಯರು ಯುವಕರು ಕಳೆದ ಹಲವು ವರ್ಷಗಳಿಂದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದು ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಈ ಸಮಸ್ಯೆ ಹಾಗೆಯೇ ಉಳಿದಿದೆ ,


29-10-2025 ರಂದು ತಹಶಿಲ್ದಾರ ರಾಮದುರ್ಗ , ಕಾರ್ಯನಿರ್ವಾಹಕ ಅಧಿಕಾರಿ ತಾಲೂಕ ಪಂಚಾಯತ ರಾಮದುರ್ಗ , ಕ್ಷೇತ್ರ ಶಿಕ್ಷಣಾಧಿಕಾರಿ ರಾಮದುರ್ಗ , ಜಿಲ್ಲಾಧಿಕಾರಿಗಳು , ಜಿಲ್ಲಾಪಂಚಾಯತ ಸಿ.ಇ.ಒ ಹಾಗೂ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಇವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು ಇಲ್ಲಿಯವರೆಗೂ ಯಾವುದೇ ಸ್ಪಂದನೆ ಸಿಗದ ಕಾರಣ ಇಂದು ಶಾಂತ ರೀತಿಯ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು ,
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರೌಢಶಾಲಾ ಆವರಣದಲ್ಲಿ ವಾಸವಾಗಿರುವ ವಸತಿ ರಹಿತರಿಗೆ ಸರಕಾರಿ ಗೋಮಾಳ ಜಾಗೆ ಗ್ರಾಮದಲ್ಲಿ ಇದ್ದರೆ ಅಂತವರ ಪಟ್ಟಿಯನ್ನು ಮಾಡಿ ಸಲ್ಲಿಸಲು ಪಿ.ಡಿ.ಒ ಅವರಿಗೆ ಸೂಚಿಸಿದರು ಸರಕಾರದ ನಿಯಮದ ಪ್ರಕಾರ ಯಾರು ವಸತಿ ರಹಿತರು ಇರುತ್ತಾರೋ ಅವರಿಗೆ ಮನೆಗಳನ್ನು ಹಂಚಿಕೆ ಮಾಡಲು ಗ್ರಾಮ ಸಭೆಯನ್ನು ನಡೆಸಿ ಗ್ರಾಮಸ್ಥರೇ ನಿರ್ಧರಿಸಲು ತಿಳಿಸಿ ಈ ಪ್ರತಿಭಟನೆಯನ್ನು ಕೈ ಬಿಡಯವಂತೆ ಪ್ರತಿಭಟನಾ ನಿರತರಿಗೆ ಮನವೊಲಿಸಿದರು,

ಪ್ರತಿಭಟನೆಯಲ್ಲಿ ಕಲಹಾಳ ಗ್ರಾಮದ ಯುವ ಮುಖಂಡ ಕಲ್ಲಪ್ಪ ಜಗ್ಗಲ , ಧಾರವಾಡ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಶಂಕರ ಹಲಗತ್ತಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು , ಮುಖಂಡರಾದ ಶಿವಬಸಪ್ಪ ಹಲಗತ್ತಿ , ದುಂಡಯ್ಯ ಹಿರೇಮಠ ,ಕರಿಬಸಪ್ಪ ಮರಿಬಾಶೆಟ್ಟಿ ,ಮಹದೇವ ಕಟ್ಟಿ , ಮಲ್ಲಪ್ಪ ಹಾದಿಮನಿ , ಮುತ್ತಪ್ಪ ರಾಯರಡ್ಡಿ , ಹನಮಂತ ಮಾದರ , ಶಿವಪ್ಪ ಕಂಬಳಿ , ವೆಂಕಣ್ಣ ಡೊಂಬರಳ್ಳಿ , ಪ್ರಭು ಬೀರನೂರ , ಮಲ್ಲಪ್ಪ ಹೂಗಾರ , ಹನಮಂತಗೌಡ ಪಾಟೀಲ , ಶಂಕರಗೌಡ ವಿ,ಪಾಟೀಲ , ಮಹದಾಯಿ ಹೋರಾಟಗಾರ ಹನಮಪ್ಪ ಮಡಿವಾಳರ , ಹಲವಾರು ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು
ಪ್ರತಿಭಟನೆಯು ಶಾಂತರೀತಿಯಿಂದ ನಡೆಯಲು ಸುರೇಬಾನ ಪೋಲೀಸ್ ಠಾಣೆಯ ಪಿ.ಎಸ್.ಐ ಎಸ್.ಎಚ್.ಪವಾರ ನೇತೃತ್ವದಲ್ಲಿ ಬಂದೋಬಸ್ತ ಒದಗಿಸಿದರು

Hot this week

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ ಪತ್ರದ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯಕ್ಕೆ ಬರ ಅಧ್ಯಯನ ತಂಡ ನಿಯೋಜಿಸಿ: ಪ್ರಧಾನಿ ಮೋದಿ ಅವರಿಗೆ...

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

Topics

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು: ಸಿಎಂ ಡಿ ಕೆ ಶಿವಕುಮಾರ್

ರೈತರನ್ನು ಉಳಿಸಬೇಕು, ಕುಡಿಯುವ ನೀರು ಪೂರೈಸಬೇಕು, ಕೋರ್ಟ್ ಆದೇಶ ಪಾಲನೆಯೂ ಮಾಡಬೇಕು:...

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಮುಖ್ಯಮಂತ್ರಿಗೆ ಹೆಚ್.ಡಿ.ಕುಮಾರಸ್ವಾಮಿ...

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ ಅವಕಾಶ: ಸಿಎಂ ಡಿ ಕೆ ಶಿವಕುಮಾರ್

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಜನಪ್ರತಿನಿಧಿಗಳು, ಗಣ್ಯರಿಗೆ...

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಶಾಸಕ ಯಾಸಿನ್ ಅವರು ಪ್ರಗತಿಪರ ಕೆಲಸಗಾರರು: ಸಿಎಂ ಡಿ ಕೆ...

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನ

ಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ...

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ

ಮಹಾಜನ ವರದಿ ಸಂಪೂರ್ಣ ಜಾರಿಗೆ ಸರ್ಕಾರದ ನಿರ್ಣಯ ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ...
spot_img

Related Articles

Popular Categories

spot_img