Tuesday, February 10, 2026
31.1 C
Belagavi

ಇಂದಿರಾ ಕ್ಯಾಂಟೀನ್ ರಾಜ್ಯ ಮಟ್ಟದ ಸ್ಟೀರಿಂಗ್ ಸಮಿತಿಗೆ ಸತೀಶ ಜಿನಗಾ ಪೀರು ಎಸ್. ತಳವಾರ ಆಯ್ಕೆ: ಊಟ–ಉಪಹಾರದ ಮಿತಿ ಹೆಚ್ಚಳಕ್ಕೆ ಭರವಸೆ

advertisement

spot_img

ಇಂದಿರಾ ಕ್ಯಾಂಟೀನ್ ಯೋಜನೆಯ ಮೇಲ್ವಿಚಾರಣೆ, ಗುಣಮಟ್ಟದ ಪರಿಶೀಲನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸ್ಟೀರಿಂಗ್ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಪೀರು ಎಸ್. ತಳವಾರ ಅವರಿಗೆ ರಾಮದುರ್ಗ ನಗರದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪೀರು ಎಸ್. ತಳವಾರ ಅವರು, ಶಾಸಕ ಅಶೋಕ ಪಟ್ಟಣವರ ಅವರು ಸೂಚಿಸಿದಂತೆ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು. ಇಂದಿರಾ ಕ್ಯಾಂಟೀನ್ ಸದಸ್ಯನಾಗಿ ಜನಸಾಮಾನ್ಯರಿಗೆ ಉತ್ತಮ ಸೇವೆ ನೀಡುವುದು ತಮ್ಮ ಕರ್ತವ್ಯ ಎಂದು ತಿಳಿಸಿದರು.

ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಇಂದಿರಾ ಕ್ಯಾಂಟೀನ್‌ನಲ್ಲಿ ದಿನಕ್ಕೆ 300 ಪ್ಲೇಟ್ ಉಪಹಾರ ಹಾಗೂ ಊಟ ಮಾತ್ರ ಲಭ್ಯವಿದ್ದು, ಈ ಪ್ರಮಾಣವನ್ನು 500 ಪ್ಲೇಟ್‌ಗೆ ಹೆಚ್ಚಿಸುವ ಕುರಿತು ಶಾಸಕ ಅಶೋಕ ಪಟ್ಟಣವರ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದೇ ಇಂದಿರಾ ಕ್ಯಾಂಟೀನ್ ರಾಜ್ಯ ಮಟ್ಟದ ಸ್ಟೀರಿಂಗ್ ಸಮಿತಿಯ ಇನ್ನೊರ್ವ ಸದಸ್ಯರಾದ ಸತೀಶ ಜೀನಗಾ ಅವರು ಮಾತನಾಡಿ, ಇತ್ತೀಚೆಗೆ ಅಧಿಕಾರ ಸ್ವೀಕರಿಸಿರುವ ಹಿನ್ನೆಲೆಯಲ್ಲಿ ಒಂದು ವಾರದೊಳಗೆ ಕ್ಯಾಂಟೀನ್‌ಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಹೆಚ್ಚಿಸಲಾಗುವುದು. ಜೊತೆಗೆ ಉಪಹಾರ ಮತ್ತು ಊಟದ ಮಿತಿಯನ್ನು 300 ರಿಂದ 500 ಪ್ಲೇಟ್‌ಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇಂದಿರಾ ಕ್ಯಾಂಟೀನ್ ಸದಸ್ಯರು ಉಪಸ್ಥಿತರಿದ್ದರು.

Hot this week

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

Topics

ಟ್ರ್ಯಾಕ್ಟರ್ಗಳಲ್ಲಿ ಡಿಜೆ ಸೌಂಡ್ ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಉಪವಾಸ ಧರಣಿ ಸತ್ಯಾಗ್ರಹ.

ಬೆಳಗಾವಿ: ಜಿಲ್ಲೆಯಾದ್ಯಂತ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಕಾನೂನುಬಾಹಿರವಾಗಿ ಅಳವಡಿಸಿರುವ ಅಬ್ಬರದ...

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ. ಶಿವಕುಮಾರ್‌

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು:...

ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರ-ಮುಖ್ಯಮಂತ್ರಿ ಸಿದ್ದರಾಮಯ್ಯ

ಇತಿಹಾಸ ತಿಳಿಯದಿದ್ದರೆ ಭವಿಷ್ಯ ನಿರ್ಮಾಣ ಸಾಧ್ಯವಿಲ್ಲ ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಶಿಕ್ಷಣ ಅತ್ಯಗತ್ಯ ಎಸ್...

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ: ಡಿಸಿಎಂ ಡಿ.ಕೆ....

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಬುಡಕಟ್ಟು...

ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ.

ಬೆಳಗಾವಿಯ ಗೃಹ ಕಚೇರಿಯಲ್ಲಿ ಇಂದು ಗ್ರಾಮೀಣ ಭಾಗದ ಪ್ರತಿಯೊಬ್ಬ ಮಹಿಳೆಯೂ ಆರ್ಥಿಕವಾಗಿ...
spot_img

Related Articles

Popular Categories

spot_img