Wednesday, August 12, 2026
20.7 C
Belagavi

ಧರ್ಮ ದ ಕಾಲಂ ನಲ್ಲಿ ಹಿಂದೂ ಜಾತಿ ಕಾಲಂ ರೆಡ್ಡಿ ಅಂತ ಬರೆಯಿಸಿ ಪ್ರಭಾಕರ ರೆಡ್ಡಿ

advertisement

spot_img

ರಾಮದುರ್ಗ:ರಡ್ಡಿ ಸಮುದಾಯ ಅಂದ ತಕ್ಷಣ ಎಲ್ಲರೂ ಶ್ರೀಮಂತರಿರುವುದಿಲ್ಲ. ನಮ್ಮ ಸಮುದಾಯದಲ್ಲಿ ಸಾಕಷ್ಟು ಬಡವರಿದ್ದಾರೆ. ಅವರ ಅಭಿವೃದ್ಧಿಗೆ ಸರಕಾರ ರೆಡ್ಡಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಸಮಾಜದ ಜನತೆಯ ಪ್ರಗತಿಗೆ ಸಹಕಾರ ನೀಡಬೇಕು ಎಂದು ರಡ್ಡಿ ಜನಸಂಘದ ರಾಜ್ಯಾಧ್ಯಕ್ಷ ಪ್ರಭಾಕರ ರೆಡ್ಡಿ ಹೇಳಿದರು.ಪಟ್ಟಣದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಾಂತರಾಜ ಆಯೋಗ ರೆಡ್ಡಿ ಸಮುದಾಯದ ಆರ್ಥಿಕ ಹಾಗೂ ಅಂಕಿ ಸಂಖ್ಯೆಗಳ ಕುರಿತು ನಿಖರ ಮಾಹಿತಿ ಸರಕಾರಕ್ಕೆ ಸಲ್ಲಿಸಿಲ್ಲ. 35-40 ಲಕ್ಷ ಜನಸಂಖ್ಯೆ ಹೊಂದಿದ ರಡ್ಡಿ ಸಮುದಾಯವನ್ನು ಕೇವಲ 7 ಲಕ್ಷ ಜನಸಂಖ್ಯೆಗೆ ಸೀಮಿತಗೊಳಿಸಲಾಗಿದೆ. ಕಾಂತರಾಜ ಆಯೋಗದ ವರದಿಯಿಂದ ಸಮುದಾಯ ಅಸಮಾಧಾನಗೊಂಡಿದೆ. ಸರಕಾರ ರಾಜ್ಯದ ಉದ್ದಗಲಕ್ಕೂ ಮೂಲೆ, ಮೂಲೆಯಲ್ಲಿರುವ ಸಮುದಾಯದ ಜನತೆಯನ್ನು ಗುರುತಿಸಿ, ನೈಜ ಸಮೀಕ್ಷೆ ನಡೆಸಲು ಸರಕಾರ ಮುಂದಾಗಬೇಕು.

ಪ್ರಸ್ತುತ ಸರಕಾರ ನಡೆಸುತ್ತಿರುವ ಜಾತಿ ಜನಗಣತಿ ಸಮೀಕ್ಷೆಯ ಜಾತಿ 1105 ಕಾಲಂನಲ್ಲಿ ಸಮಾಜ ರಡ್ಡಿ ಎಂದು ಧರ್ಮ ಎಂದಲ್ಲಿ ಹಿಂದು ಎಂದು ಸಮುದಾಯದ,ಜನತೆ ಬರೆಯಿಸಬೇಕು. ಯಾವುದೇ ಕಾರಣಕ್ಕೂ ಉಪ ಪಂಗಡಗಳ ಹೆಸರು ಬರೆಯಿಸಬಾರದು ಎಂದು ಮನವಿ ಮಾಡಿದ ಅವರು, ರಡ್ಡಿ ಜನಸಂಘ ಸ್ಥಾಪನೆಯಾಗಿ ಸೆಪ್ಟೆಂಬರ-24 ಕ್ಕೆ ಸುಮಾರು 100 ವರ್ಷ ಪೂರೈಸುತ್ತಿದ್ದು, ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸರ್ವ ಜನನಾಯಕರನ್ನು ಕರೆದು ಬೆಂಗಳೂರಿನ ಅರಮನೆ ಆವರಣದಲ್ಲಿ ಸೆಪ್ಟೆಂಬರ-24 ರಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ರಡ್ಡಿ ಸಮುದಾಯದ ರಾಜ್ಯ ಹಾಗೂ ತಾಲೂಕಿನ ಸಮಸ್ತ ಸಮಾಜ ಬಾಂಧವರು ಬೆಂಗಳೂರಿನಲ್ಲಿ ನಡೆಯುತ್ತಿರುವ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೆ ಸಹಕಾರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಪ್ರಭಾಕರ ರಡ್ಡಿ ಮನವಿ ಮಾಡಿದರು.

ಸಮಾಜದ ಈ ಸಂದರ್ಭದಲ್ಲಿ ರಡ್ಡಿ ಜನಸಂಘದ ಶಾಂತರಾಜು, ರಡ್ಡಿ ತಾಲೂಕಾಧ್ಯಕ್ಷ ಜ್ಞಾನೇಶ್ವರ ಮೇಲಪ್ಪಗೋಳ, ಕಲ್ಲಣ್ಣ ವಜ್ರಮಟ್ಟಿ, ರಾಜಶೇಖರ ತೋಳಗಟ್ಟಿ ಸೇರಿದಂತೆ ಸಮಾಜದ ಮುಖಂಡರು ಮತ್ತಿತರರಿದ್ದರು.

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img