Thursday, August 13, 2026
25.1 C
Belagavi

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

advertisement

spot_img

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

ಕೇಂದ್ರ ತಂಡ ಬಂದಾಗ ಪರಿಸ್ಥಿತಿ ಮನವರಿಕೆ ಮಾಡಿಕೊಡಿ

ಕಾಗದದ ಮೇಲಿನ ಪರಿಸ್ಥಿತಿ ಒಪ್ಪಲ್ಲ, ಫೀಲ್ಡ್ ವರ್ಕ್ ಮಾಡಿ ವರದಿ ಕೊಡಿ

178 ತಾಲೂಕುಗಳಲ್ಲಿ ಮಳೆ ಕೊರತೆ

ರಾಜ್ಯದ ಜಲಾಶಯಗಳಲ್ಲಿ 40% ಮಾತ್ರ ನೀರು ಸಂಗ್ರಹ

ಕುಡಿಯುವ ನೀರು, ಜಾನುವಾರು ಮೇವಿಗೆ ಆದ್ಯತೆ

3,235 ಸಣ್ಣ ನೀರಾವರಿ ಕೆರೆಗಳಲ್ಲಿ 50% ಗಿಂತ ಕಡಿಮೆ ನೀರು

ಬೋರ್ ವೆಲ್ ಬೋಗಸ್ ಬಿಲ್ ಸೃಷ್ಟಿ ಸಹಿಸಲ್ಲ

ಬೆಂಗಳೂರು, 

“ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲು ಸಮರ್ಪಕ ವರದಿ ಸಿದ್ಧಪಡಿಸಿ. ಸ್ಥಳ ಪರಿಶೀಲನೆ ಮಾಡಿ ವರದಿ ರೂಪಿಸಬೇಕು, ಕಚೇರಿಯಲ್ಲಿ ಕೂತು ತಯಾರಿಸಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆ ಹಾಗೂ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಭಾನುವಾರ ಮಾತನಾಡಿದರು.

“ನಮ್ಮ ವರದಿ ಬಳಿಕ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿದಾಗ ಅವರಿಗೆ ನಿಖರವಾಗಿ ಮಾಹಿತಿ ನೀಡಬೇಕು. ಕೇಂದ್ರ ತಂಡ ಕಳುಹಿಸುವ ಬಗ್ಗೆ ಈಗಾಗಲೇ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.

“ಇಂದು ಬರದ ಪರಿಸ್ಥಿತಿ ಕುರಿತು ವಿವಿಧ ಇಲಾಖೆಗಳ ಜೊತೆಗೆ ಚರ್ಚೆ ಮಾಡಿದ್ದೇವೆ. ಎಲ್ಲರೂ ಒಟ್ಟಾಗಿ ಟೀಮ್ ಕರ್ನಾಟಕವಾಗಿ ಕಾರ್ಯನಿರ್ವಹಿಸಲು ಸೂಚಿಸಿದ್ದೇನೆ. ರಾಜ್ಯದಲ್ಲಿ 60% ಮಳೆ ಕೊರತೆ ಎದುರಾಗಿದ್ದು, 178 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದು, 158 ತಾಲೂಕುಗಳಲ್ಲಿ ತೀರಾ ಸಾಧಾರಣ ಮಳೆಯಾಗಿದೆ. 20 ತಾಲೂಕುಗಳಲ್ಲಿ ಮಳೆ ಆಗಿಲ್ಲ. ವಿಜಯನಗರ ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ಈ ಎಲ್ಲಾ ಅಂಶಗಳ ಬಗ್ಗೆ ಚರ್ಚೆ ಮಾಡಲಾಗಿದೆ. ರಾಜ್ಯದ ಜಲಾಶಯ 40% ಮಾತ್ರ ನೀರು ಶೇಖರಣೆಯಾಗಿದ್ದು, ಕೇವಲ ಕುಡಿಯುವ ನೀರಿಗೆ ಮಾತ್ರ ಬಳಸಲಾಗುವುದು” ಎಂದು ವಿವರಿಸಿದರು.

“ಅಣೆಕಟ್ಟುಗಳಲ್ಲಿ ನೀರು ಬಂದರೆ ಮಾತ್ರ ಸಮಿತಿಗಳು ಸಭೆ ಮಾಡಬೇಕು. ನೀರಿನ ಪ್ರಮಾಣದ ಬಗ್ಗೆ ಸಮಿತಿಯವರು ಆಗಾಗ್ಗೆ ರೈತರಿಗೆ ಮನದಟ್ಟು ಮಾಡಬೇಕು. ಬೆಳೆ ಹಾಕಿ ನೀರು ಬಿಡಿ ಎಂದರೆ ಬಿಡಲು ಕಷ್ಟವಾಗುತ್ತದೆ. ಹೀಗಾಗಿ ಬೆಳೆ ಹಾಕಬಾರದು ಎಂದು ಮನವಿ ಮಾಡುತ್ತೇವೆ” ಎಂದರು.

“ಜಲ ವಿದ್ಯುತ್ ಕೇವಲ 23% ಮಾತ್ರ ಇದೆ. ಎಲ್ಲಾ ತಾಲೂಕುಗಳಲ್ಲಿ ಅಂತರ್ಜಲ ಪ್ರಮಾಣದ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಕೆರೆಗಳಲ್ಲಿ ನೀರಿನ ಮಟ್ಟ ಕುಸಿದಿದೆ. 3,817 ಸಣ್ಣ ನೀರಾವರಿ ಕೆರೆಗಳ ಪೈಕಿ, 3,235 ಕೆರೆಗಳಲ್ಲಿ 50%ಗಿಂತ ಕಡಿಮೆ ನೀರಿದೆ. 32,504 ಜಿಲ್ಲಾ ಪಂಚಾಯ್ತಿ ಕೆರೆಗಳ ಪೈಕಿ, 27,450 ಕೆರೆಗಳಲ್ಲಿ 50%ಗಿಂತ ಕಡಿಮೆ ನೀರಿದೆ. ಈಗಾಗಲೇ ಗ್ರಾಮೀಣ ಭಾಗದ ವಿಧಾನಸಭಾ ಕ್ಷೇತ್ರಗಳಿಗೆ ಕುಡಿಯುವ ನೀರಿಗಾಗಿ ತಲಾ ₹1 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. 379 ಕೋಟಿ ಹಣವನ್ನು ನೀಡಲಾಗಿದೆ. ಹಣದ ಕೊರತೆ ಇಲ್ಲ. ಶಾಸಕರ ನೇತೃತ್ವದಲ್ಲಿ ಸಭೆ ಮಾಡಿ ಹಣ ಬಳಕೆಗೆ ಸೂಚಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಮನರೇಗಾ ವಿಚಾರದಲ್ಲಿ ಕೇಂದ್ರ ಸರ್ಕಾರ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೂ ವಿಬಿ ಗ್ರಾಮ್ ಜಿ ಯೋಜನೆಯಲ್ಲಿ 40% ಅನುದಾನವನ್ನು ರಾಜ್ಯ ಸರ್ಕಾರ ಹಾಕಬೇಕಿದೆ. ಕೇಂದ್ರ ಸರ್ಕಾರ ಯಾವೆಲ್ಲ ಯೋಜನೆ ಕೈಗೊಳ್ಳಬಹುದು ಎಂದು ತಿಳಿಸಿದ್ದು, ಆದಷ್ಟು ಸಮುದಾಯ, ಮೂಲ ಸೌಕರ್ಯ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲಾಗುವುದು” ಎಂದರು.

“ಯಾವ ಭಾಗದ ಜನರು ವಲಸೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಮೇವು, ಗೊಬ್ಬರ ಪೂರೈಕೆಗೆ ಸೂಚನೆ ನೀಡಲಾಗಿದೆ. ಪ್ರತಿ ಕೊಳವೆ ಬಾವಿ ಕೊರೆಯುವಾಗ ನಕಲಿ ಬಿಲ್ ಗಳು ಬಾರದಂತೆ ನೋಡಿಕೊಳ್ಳಬೇಕು. ಕೊಳವೆ ಬಾವಿ ಕೊರೆಯುವಾಗ ವಿಡಿಯೋ ದಾಖಲೆ ಇರಬೇಕು. ವಿದ್ಯುತ್ ಇಲಾಖೆಯವರು ಟ್ರಾನ್ಸ್ಫಾರ್ಮರ್ ರಿಪೇರಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಲಾಗಿದೆ” ಎಂದರು.

“ಅಧಿಕಾರಿಗಳು ಕೇಂದ್ರ ಪ್ರದೇಶದಲ್ಲಿ ಇರಬೇಕು. ಯಾವುದೇ ಕೆಲಸ ಆಗಬೇಕಾದರೂ ಖುದ್ದಾಗಿ ಇರಬೇಕು ಎಂದು ಸೂಚಿಸಿದ್ದೇನೆ. ಬೆಳೆ ವಿಮೆ ವಿಚಾರವಾಗಿ ಎಲ್ಲೆಲ್ಲಿ ಅನ್ಯಾಯ ಆಗಿದೆ ಎಂದು ಪ್ರತ್ಯೇಕ ಸಭೆ ಮಾಡಿ ಪರಿಶೀಲನೆ ಮಾಡಲಾಗುವುದು” ಎಂದು ತಿಳಿಸಿದರು.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img