Sunday, March 1, 2026
22.8 C
Belagavi

ಧ್ವಜಗಳ ತೆರವುಗೊಳಿಸಲು ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ ಸುದ್ದಿಗೋಷ್ಠಿ

advertisement

spot_img

ಧ್ವಜಗಳ ತೆರವುಗೊಳಿಸಲು ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ ಸುದ್ದಿಗೋಷ್ಠಿ

ಸುರಪುರ:ನಗರದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿನ ಭೂಮಿಗಾಗಿ ದಲಿತ ಸಾಮೂಹಿಕ ಸಂಘಟನೆಗಳು ಪ್ರಭು ಕಾಲೇಜ್ ಮೈದಾನದಲ್ಲಿ ಹಾಕಲಾಗಿರುವ ಧ್ವಜಗಳ ತೆರವು ಕುರಿತು ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲಿಸಬೇಕು ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ಮಹಾತ್ಮ ಗಾಂಧಿ ವೃತದಲ್ಲಿನ ಧರಣಿ ಸ್ಥಳದಲ್ಲಿ ಗುರುವಾರ ರಾತ್ರಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ತಹಶೀಲ್ದಾರರು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದಾಗ ನಾವು ನ್ಯಾಯಾಲಯದ ಆದೇಶದಂತೆ ಹಾಕಿರುವ ಧ್ವಜಗಳನ್ನು ತೆರವುಗೊಳಿಸಲು ಸಿದ್ಧರಿದ್ದೇವೆ ಮೊದಲು ದಲಿತ ಸಂಘಟನೆಗಳಿಂದ ಹಾಕಲಾಗಿರುವ ಧ್ವಜಗಳನ್ನು ತೆರವುಗೊಳಿಸುವಂತೆ ತಿಳಿಸಿದ್ದೇವೆ.

ಇಂದು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಲಿತ ಸಂಘಟನೆಗಳ ಮುಖಂಡರು ಧ್ವಜಗಳನ್ನು ತೆರವುಗೊಳಿಸುವುದಿಲ್ಲ ಎಂದು ಹೇಳಿದ್ದು ಅಧಿಕಾರಿಗಳು ಮತ್ತು ನ್ಯಾಯಾಲಯದ ಆದೇಶಕ್ಕೂ ವಿರೋಧ ವ್ಯಕ್ತಪಡಿಸಿರುವುದು ಸರಿಯಾದ ನಡೆಯಲ್ಲ. ಆದರಿಂದ ನಾವು ಈಗಾಗಲೇ ಪ್ರಭು ಕಾಲೇಜ್ ಮೈದಾನದ ಬಳಿಯಲ್ಲಿನ ಅಂಗಡಿಗಳ ಬೀಗ ತೆರೆಯುವಂತೆ, ಜಿಲ್ಲಾಧಿಕಾರಿಗಳು ಭೂಮಿ ಹಂಚಿಕೆ ಮಾಡಿ ಹೊರಡಿಸಿದ ಆದೇಶ ರದ್ದುಗೊಳಿಸುವಂತೆ ಹಾಗೂ ಪ್ರಭು ಕಾಲೇಜ್ ಮೈದಾನದಲ್ಲಿ ಹಾಕಲಾಗಿರುವ ಧ್ವಜಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸುರಪುರ ಬಂದ್ ಮಾಡಿ ನಂತರ ನಿರಂತರ ಧರಣಿಯನ್ನು ನಡೆಸಿದ್ದೆವು. ನಮ್ಮ ಮನವಿಯಂತೆ ಈಗಾಗಲೇ ಎರಡು ಬೇಡಿಕೆಗಳು ಈಡೇರಿದ್ದು ಧ್ವಜಗಳ ತೆರವುಗೊಳಿಸಲು ಅಧಿಕಾರಿಗಳು ನಾಲ್ಕು ದಿನಗಳ ಸಮಯಾವಕಾಶ ತೆಗೆದುಕೊಂಡಿದ್ದರಿಂದ ನಾವು ಕೂಡ ಒಪ್ಪಿಕೊಂಡಿದ್ದೆವು ಆದರೆ ಶನಿವಾರ ಧ್ವಜಗಳನ್ನು ತೆರವುಗೊಳಿಸದಿದ್ದಲ್ಲಿ ನಮ್ಮ ಧರಣಿ ಉಗ್ರ ಸ್ವರೂಪ ಪಡೆಯಲಿದ್ದು ಹೆದ್ದಾರಿಯನ್ನು ತಡೆದು ಪ್ರತಿಭಟನೆಯನ್ನು ನಡೆಸಲಿದ್ದೇವೆ ಎಂದು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಮೇಶ ದೊರೆ ಅಲ್ದಾಳ, ಭೀಮನಗೌಡ ಹೆಮನೂರ, ಹಣಮಂತ ಕಟ್ಟಿಮನಿ, ಶಿವ ಮೋನಯ್ಯ ನಾಯಕ, ಚಂದ್ರು ಎಲಿಗಾರ, ವೆಂಕಟೇಶ ಬೇಟೆಗಾರ, ರಾಘವೇಂದ್ರ ಕುಲಕರ್ಣಿ, ದೇವೇಂದ್ರಪ್ಪ ಮಾಲಿಪಾಟೀಲ, ಮಲ್ಲು ದಂಡಿನ್, ವಿನಾಯಕ ಕರಡಕಲ್, ಗಂಗಾಧರ ನಾಯಕ,ಶರಣು ನಾಯಕ, ರಂಗನಾಥ ನಾಯಕ, ಭೀಮು ನಾಯಕ ಮಲ್ಲಿಬಾವಿ, ಮಲ್ಲಪ್ಪ ಹುಬ್ಬಳ್ಳಿ, ಬಸವರಾಜ ಕೋನ್ಹಾಳ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Hot this week

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

Topics

ನಂದೇಶ್ವರ ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ

ಸವದಿ ಕಣಕಣದಲ್ಲೂ ಬಸವ ತತ್ವ ತುಂಬಿದೆ ನಂದೇಶ್ವರ ಬಸವ ಕೇಂದ್ರ ಸವದಿ ಗ್ರಾಮದ...

ಉತ್ತರ ಕರ್ನಾಟಕ ಅಭಿವೃದ್ಧಿಗೆ. 15 ಸಾವಿರ ಕೋಟಿ ವಿಶೇಷ ಅನುದಾನ ನೀಡಿ- ಶಿವಕುಮಾರ. R. ಮೇಟಿ (ಅಗ್ನಿ)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಉತ್ತರ...

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಖಂಡನೆ ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು:...

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ

ಬಸವ ತತ್ವಕ್ಕೆ ಮಹಾಂತ ಶಿವಯೋಗಿಗಳ ಕೊಡುಗೆ ಅಪಾರ ಬಸವ ತತ್ವಗಳನ್ನು ಚಾಚು ತಪ್ಪದೆ...

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ

80 ಕೆಜಿ ಭಾರ ಜಗ್ಗುವ ಟ್ರ್ಯಾಕ್ಟರ್ ಕಂಡು ಹಿಡಿದ ವಿದ್ಯಾರ್ಥಿ ರಾಷ್ಟ್ರೀಯ ವಿಜ್ಞಾನ...

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ

ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೆ ಲಾಭದಲ್ಲಿ ಪುಣ್ಯ ಗಳಿಸಲು ಸಾಧ್ಯ: ಬಸವರಾಜ ಬೊಮ್ಮಾಯಿ ಬ್ಯಾಡಗಿಯಲ್ಲಿ...

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ!

ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಉಪಕ್ರಮದಡಿ ಕೈಗಾರಿಕಾ ಅನುಮತಿ ಮತ್ತಷ್ಟು ಸಲೀಸು-ಶೀಘ್ರ! ರಾಜ್ಯದ...

ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ.ಮುಖ್ಯಮಂತ್ರಿ Siddaramaiah

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ...
spot_img

Related Articles

Popular Categories

spot_img