Monday, August 10, 2026
22.1 C
Belagavi

ಧ್ವಜಗಳ ತೆರವುಗೊಳಿಸಲು ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ ಸುದ್ದಿಗೋಷ್ಠಿ

advertisement

spot_img

ಧ್ವಜಗಳ ತೆರವುಗೊಳಿಸಲು ಆಗ್ರಹಿಸಿ ಸಾಮೂಹಿಕ ಸಂಘಟನೆಗಳ ಒಕ್ಕೂಟ ಸುದ್ದಿಗೋಷ್ಠಿ

ಸುರಪುರ:ನಗರದ ಶ್ರೀ ಪ್ರಭು ಕಾಲೇಜ್ ಮೈದಾನದಲ್ಲಿನ ಭೂಮಿಗಾಗಿ ದಲಿತ ಸಾಮೂಹಿಕ ಸಂಘಟನೆಗಳು ಪ್ರಭು ಕಾಲೇಜ್ ಮೈದಾನದಲ್ಲಿ ಹಾಕಲಾಗಿರುವ ಧ್ವಜಗಳ ತೆರವು ಕುರಿತು ನ್ಯಾಯಾಲಯ ನೀಡಿರುವ ಆದೇಶವನ್ನು ಪಾಲಿಸಬೇಕು ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.
ಪಟ್ಟಣದ ಮಹಾತ್ಮ ಗಾಂಧಿ ವೃತದಲ್ಲಿನ ಧರಣಿ ಸ್ಥಳದಲ್ಲಿ ಗುರುವಾರ ರಾತ್ರಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ತಹಶೀಲ್ದಾರರು ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದಾಗ ನಾವು ನ್ಯಾಯಾಲಯದ ಆದೇಶದಂತೆ ಹಾಕಿರುವ ಧ್ವಜಗಳನ್ನು ತೆರವುಗೊಳಿಸಲು ಸಿದ್ಧರಿದ್ದೇವೆ ಮೊದಲು ದಲಿತ ಸಂಘಟನೆಗಳಿಂದ ಹಾಕಲಾಗಿರುವ ಧ್ವಜಗಳನ್ನು ತೆರವುಗೊಳಿಸುವಂತೆ ತಿಳಿಸಿದ್ದೇವೆ.

ಇಂದು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದಲಿತ ಸಂಘಟನೆಗಳ ಮುಖಂಡರು ಧ್ವಜಗಳನ್ನು ತೆರವುಗೊಳಿಸುವುದಿಲ್ಲ ಎಂದು ಹೇಳಿದ್ದು ಅಧಿಕಾರಿಗಳು ಮತ್ತು ನ್ಯಾಯಾಲಯದ ಆದೇಶಕ್ಕೂ ವಿರೋಧ ವ್ಯಕ್ತಪಡಿಸಿರುವುದು ಸರಿಯಾದ ನಡೆಯಲ್ಲ. ಆದರಿಂದ ನಾವು ಈಗಾಗಲೇ ಪ್ರಭು ಕಾಲೇಜ್ ಮೈದಾನದ ಬಳಿಯಲ್ಲಿನ ಅಂಗಡಿಗಳ ಬೀಗ ತೆರೆಯುವಂತೆ, ಜಿಲ್ಲಾಧಿಕಾರಿಗಳು ಭೂಮಿ ಹಂಚಿಕೆ ಮಾಡಿ ಹೊರಡಿಸಿದ ಆದೇಶ ರದ್ದುಗೊಳಿಸುವಂತೆ ಹಾಗೂ ಪ್ರಭು ಕಾಲೇಜ್ ಮೈದಾನದಲ್ಲಿ ಹಾಕಲಾಗಿರುವ ಧ್ವಜಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸುರಪುರ ಬಂದ್ ಮಾಡಿ ನಂತರ ನಿರಂತರ ಧರಣಿಯನ್ನು ನಡೆಸಿದ್ದೆವು. ನಮ್ಮ ಮನವಿಯಂತೆ ಈಗಾಗಲೇ ಎರಡು ಬೇಡಿಕೆಗಳು ಈಡೇರಿದ್ದು ಧ್ವಜಗಳ ತೆರವುಗೊಳಿಸಲು ಅಧಿಕಾರಿಗಳು ನಾಲ್ಕು ದಿನಗಳ ಸಮಯಾವಕಾಶ ತೆಗೆದುಕೊಂಡಿದ್ದರಿಂದ ನಾವು ಕೂಡ ಒಪ್ಪಿಕೊಂಡಿದ್ದೆವು ಆದರೆ ಶನಿವಾರ ಧ್ವಜಗಳನ್ನು ತೆರವುಗೊಳಿಸದಿದ್ದಲ್ಲಿ ನಮ್ಮ ಧರಣಿ ಉಗ್ರ ಸ್ವರೂಪ ಪಡೆಯಲಿದ್ದು ಹೆದ್ದಾರಿಯನ್ನು ತಡೆದು ಪ್ರತಿಭಟನೆಯನ್ನು ನಡೆಸಲಿದ್ದೇವೆ ಎಂದು ಎಚ್ಚರಿಸಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ರಮೇಶ ದೊರೆ ಅಲ್ದಾಳ, ಭೀಮನಗೌಡ ಹೆಮನೂರ, ಹಣಮಂತ ಕಟ್ಟಿಮನಿ, ಶಿವ ಮೋನಯ್ಯ ನಾಯಕ, ಚಂದ್ರು ಎಲಿಗಾರ, ವೆಂಕಟೇಶ ಬೇಟೆಗಾರ, ರಾಘವೇಂದ್ರ ಕುಲಕರ್ಣಿ, ದೇವೇಂದ್ರಪ್ಪ ಮಾಲಿಪಾಟೀಲ, ಮಲ್ಲು ದಂಡಿನ್, ವಿನಾಯಕ ಕರಡಕಲ್, ಗಂಗಾಧರ ನಾಯಕ,ಶರಣು ನಾಯಕ, ರಂಗನಾಥ ನಾಯಕ, ಭೀಮು ನಾಯಕ ಮಲ್ಲಿಬಾವಿ, ಮಲ್ಲಪ್ಪ ಹುಬ್ಬಳ್ಳಿ, ಬಸವರಾಜ ಕೋನ್ಹಾಳ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img