Friday, December 12, 2025
19.4 C
Belagavi

ಕ್ಯಾಮೆರಾ “ಪ್ರವೀಣ”ನಿಗೆ ಅರಸಿ ಬಂದ ರಾಜ್ಯೋತ್ಸವ ಪ್ರಶಸ್ತಿ: ಮೌಲ್ಯಯುತ ಪತ್ರಕರ್ತನಿಗೆ ಗಣ್ಯರ ಅಭಿನಂದನೆ

advertisement

spot_img

ದೃಶ್ಯದಲ್ಲೇ ನೊಂದವರ ನೋವಿಗೆ ಮಿಡಿದ ಹೆಮ್ಮೆಯ ಪತ್ರಕರ್ತ: ಪ್ರವೀಣ್ ಶಿಂಧೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ..

ಮಾಧ್ಯಮ ಕ್ಷೇತ್ರದ ಮೌಲ್ಯ ಎತ್ತಿ ಹಿಡಿದ ಯುವ ಪತ್ರಕರ್ತ…

ಬೆಳಗಾವಿ: ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಬೆಳಗಾವಿಯ ಟಿವಿ9 ಜಿಲ್ಲಾ ಕ್ಯಾಮೆರಾಮನ್ ಪ್ರವೀಣ್ ಶಿಂಧೆ ಅವರಿಗೆ 2025ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ಪ್ರವೀಣ್ ಶಿಂಧೆ ಅವರು ಸುದೀರ್ಘ 16 ವರ್ಷಗಳ ಕಾಲ ಮಾಧ್ಯಮದಲ್ಲಿ ಸೇವೆ ಸಲ್ಲಿಸಿರುವ ಹೆಮ್ಮೆಯ ವಿಡಿಯೋ ಜರ್ನಲಿಸ್ಟ್ ಆಗಿದ್ದಾರೆ.

ಆರಂಭದಲ್ಲಿ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಟಿ ನ್ಯೂಸ್ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಪ್ರವೇಶಿಸಿದ ಅವರು ಐದು ವರ್ಷಗಳ ಕಾಲ ಅತ್ಯಂತ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ್ದರು.

ಬಳಿಕ ಬಿಟಿವಿಯಲ್ಲಿ 5 ವರ್ಷಗಳ ಕಾಲ ಸೇವೆ ಸಲ್ಲಿಸುವ ಮೂಲಕ ಸಮಾಜದಲ್ಲಿನ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದರು. ಪ್ರಸ್ತುತ ಕಳೆದ 7 ವರ್ಷಗಳಿಂದ ರಾಜ್ಯದ ಯಶಸ್ವಿ ಸುದ್ದಿವಾಹಿನಿಯಾದ ಟಿವಿ9ನಲ್ಲಿ ಬೆಳಗಾವಿ ಜಿಲ್ಲೆಯ ಕ್ಯಾಮೆರಾಮನ್ ಆಗಿ ಸೇವೆಯಲ್ಲಿದ್ದಾರೆ.

ಒಬ್ಬ ಪತ್ರಕರ್ತನಾಗಿ ಕಷ್ಟ ಎಂದವರ ಪಾಲಿನ ಆಪತ್ಭಾಂದವನಾಗಿ ಬೆಂಬಲವಾಗಿ ನಿಲ್ಲುವ ಮಾತೃ ಹೃದಯೀ ಪ್ರವೀಣ್ ಶಿಂಧೆ ಅವರು ತಮ್ಮ ವರದಿಗಾರರಾದ ಸಹದೇವ್ ಮಾನೆ ಅವರ ಪ್ರೋತ್ಸಾಹದಿಂದ ಇಂದಿಗೂ ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಗಳಿಗೆ, ನೊಂದವರು, ಬಡವರ ಪರ ಅವರ ಧ್ವನಿಯಾಗಿ ಅವರ ಸಮಸ್ಯೆಯನ್ನ ರಾಜ್ಯದ ಜನರ ಮುಂದಿಟ್ಟು ಮಾಧ್ಯಮಗಳ ನಿಜವಾದ ಜವಾಬ್ದಾರಿಯನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತ ಬಂದಿದ್ದಾರೆ. ಇವರ ಸಾಮಾಜಿಕ ಕಳಕಳಿಯ ಸೇವೆಯನ್ನು ಜಿಲ್ಲಾಡಳಿತ ಗುರುತಿಸಿ ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸಿದೆ.

ಯುವ ಪತ್ರಕರ್ತರಿಗೆ ಮಾದರಿ ವ್ಯಕ್ತಿತ್ವ : ಸತ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶಿಂಧೆ ಅವರು ತೋರಿದ ಬದ್ದತೆಯನ್ನು ಜಿಲ್ಲಾಡಳಿತವು ಗುರುತಿಸಿದೆ. ಮಾಧ್ಯಮ ರಂಗದಲ್ಲಿ ನಿರಂತರವಾಗಿ ಸಕ್ರಿಯರಾಗಿರುವ ಇವರು ತಮ್ಮ ಕ್ಯಾಮೆರಾವನ್ನು ಶೋಷಿತರು ಹಾಗೂ ಸಮಾಜದ ಅಂಚಿನಲ್ಲಿರುವ ನೊಂದ ಜನರ ದನಿಯನ್ನಾಗಿ ಪರಿಣಾಮಕಾರಿಯಾಗಿ ಬಳಸುತ್ತ ಬಂದಿದ್ದಾರೆ. ಹೀಗೆ ಸಾಮಾಜಿಕ ಬದಲಾವಣೆಯ ಗುರಿಯೊಂದಿಗೆ ಇಂದಿನ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಪತ್ರಿಕೋದ್ಯಮ, ಮಾಧ್ಯಮ ಕ್ಷೇತ್ರದ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಇವರು ಪಾತ್ರ ವಹಿಸುತ್ತಿದ್ದಾರೆ. ಇವರ ಪ್ರಾಮಾಣಿಕತೆ, ವೃತ್ತಿಪರತೆ ಯುವ ಪತ್ರಕರ್ತರಿಗೆ ಮಾದರಿಯಾಗಿದೆ.

ನಾಳೆ ನಡೆಯಲಿರುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಗಣ್ಯರು ಪ್ರವೀಣ್ ಶಿಂಧೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ತಮ್ಮ ಅವಿರತ ಕನ್ನಡ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಪ್ರವೀಣ್ ಶಿಂಧೆ ಅವರಿಗೆ ಜಿಲ್ಲಾಡಳಿತದ ಅಧಿಕಾರಿಗಳು, ಕಾರ್ಯನಿರತ ಪತ್ರಕರ್ತರ ಸಂಘ, ಜನಪ್ರತಿನಿಧಿಗಳು ಹಾಗೂ ಆರ್ ಎಂಡಿ ಡಿಜಿಟಲ್ ಮೀಡಿಯಾ ಬಳಗವೂ ಅಭಿನಂದಿಸಿದೆ.

Hot this week

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

Topics

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಸರ್ಕಾರದ ವಿರುದ್ಧ ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕು.ನಾಡಿನ ರೈತರ ಸಮಸ್ಯೆಗಳು,...

ಸಿ ಟಿ ರವಿ|ಮೆಕ್ಕೆಜೋಳ ರೈತರು ಕಳೆದ ಒಂದುವರೆ ತಿಂಗಳಿಂದ ಹೋರಾಟ ಮಾಡುತ್ತಿದ್ದಾರೆ

ರೈತರ ಸಮಸ್ಯೆ ಬಗ್ಗೆ ಈಗಾಗಲೇ ಸಾಕಷ್ಟು ಹೋರಾಟ ಮಾಡಿದ್ದೇವೆ ಈ ಅಧಿವೇಶನದಲ್ಲಿ...

ಸಚಿವ ಸಂತೋಷ್ ಲಾಡ್ ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ

ಅಭಿವೃದ್ಧಿ ವಿಚಾರದಲ್ಲಿ ನಮ್ಮ ಸರ್ಕಾರ ಗೌರವಿಸುತ್ತೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ...

ಆರೋಗ್ಯ ಸಚಿವ ದಿನೇಶ್ ಗುಂಡುರಾವ್

ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ಬೆಳಗಾವಿ ಖಾಸಗಿ ಹೋಟೆಲ್‌ನಲ್ಲಿ ಹೇಳಿಕೆ ಸಮಸ್ಯೆಗಳು ಯಾವಾಗಲು...

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್   https://youtu.be/Yy8EZZFHGjs

ಸದನದಲ್ಲಿ ಸರ್ಕಾರಕ್ಕೆ ಎದುರಾಗುವ ಪ್ರಮುಖ ವಿಚಾರಗಳು

ಇಂದಿನಿಂದ ಕುಂದಾನಗರಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಒಟ್ಟು 10 ದಿನಗಳ ಕಾಲ ನಡೆಯಲಿರುವ...

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ|ಸಿಎಂ ಸಿದ್ದರಾಮಯ್ಯ

ಕೆಂಗಲ್ ಹನುಮಂತಯ್ಯ ಪುಣ್ಯ ತಿಥಿ ಸರ್ಕಾರ ಪ್ರತಿ ಆಚರಣೆ ಮಾಡುತ್ತದೆ ಹನುಮಂತಯ್ಯ ಒಬ್ಬ ದಕ್ಷ...

ಪಂಚಭೂತಗಳಲ್ಲಿ ಲೀನವಾದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ.

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು. ಒಂದೇ ಕಡೆ ನಾಲ್ಕು ಜನರ...
spot_img

Related Articles

Popular Categories

spot_img