ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ
ರಾಮದುರ್ಗ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತಗೊಂಡ ಕೊಠಡಿ ಹಾಗೂ ನಾಮಫಲಕದ ಅನಾವರಣ ಸಮಾರಂಭ ಇಂದು ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಸುರೇಂದ್ರ ಕಾಂಬಳೆ ವಹಿಸಿದ್ದರು. ತಾಲೂಕು ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರಾದ ಶ್ರೀ ಅನಿಕೇತ ಪ್ರದೀಪ ಪಟ್ಟಣ ನವೀಕೃತಗೊಂಡ ಕೊಠಡಿಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಬೆಳಗಾವಿಯ ಮಾನ್ಯ ಉಪನಿರ್ದೇಶಕರಾದ ಶ್ರೀಮತಿ ಲೀಲಾ ಹಿರೇಮಠ ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ನಿರ್ವಹಣೆ ಹಾಗೂ ಖರ್ಚು-ವೆಚ್ಚಗಳನ್ನು ಭರಿಸಲು ಸರ್ಕಾರದಿಂದ ಪ್ರತ್ಯೇಕ ಅನುದಾನ ಮೀಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ವಿಶೇಷ ಅನುದಾನ ಒದಗಿಸುವಂತೆ ಸರ್ಕಾರದ ಮಟ್ಟದಲ್ಲಿ ಅರ್ಜಿ ಸಲ್ಲಿಸುವ ಪ್ರಯತ್ನ ಮಾಡೋಣ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಎಲ್ಲಾ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಶ್ರೀ ಎಸ್. ಪಿ. ಕರಲಿಂಗಪ್ಪನವರ, ಶಿಕ್ಷಣ ಸಂಯೋಜಕರು (ಪ್ರೌಢ ವಿಭಾಗ), ಸ್ವಾಗತ ಕೋರಿದ್ದು, ಕಾರ್ಯಕ್ರಮವನ್ನು ನಿರೂಪಿಸಿದರು



