Thursday, August 13, 2026
25.1 C
Belagavi

ಮಾಹಿತಿ ಹಕ್ಕು ಜನಪರ ಕಾಯ್ದೆ: ಆಯುಕ್ತ ಚನ್ನಾಳ

advertisement

spot_img

ಮಾಹಿತಿ ಹಕ್ಕು ಜನಪರ ಕಾಯ್ದೆ: ಆಯುಕ್ತ ಚನ್ನಾಳ
————————————-
ಬೆಳಗಾವಿ ಪೀಠ: ವಾರ್ಷಿಕ 7 ಸಾವಿರ ಅರ್ಜಿಗಳ ಇತ್ಯರ್ಥಕ್ಕೆ ಗುರಿ

ಬೆಳಗಾವಿ, “ಮಾಹಿತಿ ಹಕ್ಕು ಕಾಯ್ದೆ ಜನಪರ ಮತ್ತು ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿದೆ. ಸ್ವತಂತ್ರ ಭಾರತದಲ್ಲಿ ಅತ್ಯಂತ ಕ್ರಾಂತೀಕಾರಕ ಕಾಯ್ದೆಯಾಗಿದೆ. ಸಾಮಾನ್ಯ ಜನರಿಗೆ ಸರ್ಕಾರದ ಮಾಹಿತಿ ಸುಲಭವಾಗಿ ತಲುಪಬೇಕೆಂಬ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯು 2005 ರ ಅಕ್ಟೋಬರ್ 12 ರಂದು ಜಾರಿಗೆ ಬಂದಿರುತ್ತದೆ. ಕರ್ನಾಟಕ ರಾಜ್ಯವು ಈ ಕಾಯ್ದೆಯನ್ನು ಅನುಷ್ಠಾನಗೊಳಿಸಿದ ಪ್ರಥಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ” ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳರವರು ತಿಳಿಸಿದ್ದಾರೆ.ಕರ್ನಾಟಕ ಮಾಹಿತಿ ಹಕ್ಕು ಆಯೋಗವು ಕಳೆದ ಒಂದು ವರ್ಷದಲ್ಲಿ ರಾಷ್ಟ್ರದಲ್ಲಿಯೇ ದಾಖಲೆ ಪ್ರಮಾಣದಲ್ಲಿ 40 ಸಾವಿರ ದ್ವೀತಿಯ ಮೇಲ್ಮನವಿ ಪ್ರಕರಣಗಳನ್ನು ಇತ್ಯರ್ಥ ಮಾಡಿದೆ. ಕರ್ನಾಟಕ ಮಾಹಿತಿ ಆಯೋಗ ಬೆಳಗಾವಿ ಪೀಠದಲ್ಲಿ ಪ್ರತಿದಿನ ಸುಮಾರು 40-60 ಅರ್ಜಿಗಳ ವಿಚಾರಣೆ ಆಫ್‌ಲೈನ್ ಮತ್ತು ಆನ್‌ಲೈನನಲ್ಲಿ ನಡೆಯುತ್ತಿದ್ದು. ಗ್ರಾಮೀಣ ಭಾಗದ ಜನರ ಅರ್ಜಿಗಳಿಗೆ ಹೆಚ್ಚಿನ ಒತ್ತು ನೀಡಿ ಗ್ರಾಮೀಣ ಭಾಗದ ಸಮಸ್ಯೆಗಳಾದ ಕುಡಿಯುವ ನೀರು, ರಸ್ತೆ, ವಿದ್ಯುತ್ ಸರಬರಾಜು, ಸ್ವಚ್ಚತೆ, ಆರೋಗ್ಯ ಮತ್ತು ಇತ್ಯಾದಿ ಮೂಲ ಸೌಕರ್ಯಗಳ ಸಮಸ್ಯೆಗಳ ವಿಚಾರಣೆಗಳು ಇತ್ಯರ್ಥವಾಗುತ್ತಿದ್ದು, ಮಾಹಿತಿ ನೀಡದೇ ಇರುವ ಅಧಿಕಾರಿಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡಲು ಶಿಸ್ತು ಕ್ರಮ ಜರುಗಿಸಿ, ವಿಚಾರಣೆ ಸಮಿತಿಯ ಶಿಫಾರಸ್ಸು, ದಂಡ ಮತ್ತು ಅರ್ಜಿದಾರರಿಗೆ ಪರಿಹಾರದ ಆದೇಶಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬೆಳಗಾವಿ ಪೀಠಕ್ಕೆ ಬರುವ ಅರ್ಜಿಗಳ ಪ್ರಮಾಣ ಹೆಚ್ಚಳ ಇದ್ದುದ್ದರಿಂದ ವರ್ಷಕ್ಕೆ 6000 ರಿಂದ 7000 ವಿಚಾರಣೆಗಳ ಇತ್ಯರ್ಥಕ್ಕಾಗಿ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಮತ್ತು ಜಿಲ್ಲಾವಾರು ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

Topics

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ

ಮುತಾಲಿಕ್ ದೇಸಾಯಿ ವಿದ್ಯಾರ್ಥಿಗಳಿಗೆ ದಾರಿದೀಪ ಅಥಣಿ: ಹೆತ್ತ ತಾಯಿ ಹೊತ್ತ ಭೂಮಿ ವಿದ್ಯೆ...

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...
spot_img

Related Articles

Popular Categories

spot_img