ಕರ್ನಾಟಕದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ವಿಶ್ವಗುರು ಶ್ರೀ ಬಸವೇಶ್ವರ ಜಯಂತೋತ್ಸವ ಸಮಾರಂಭವನ್ನು ರಾಮದುರ್ಗ ಪಟ್ಟಣದ ಗುರುಭವನದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ವಿರಕ್ತ ಮಠ ಟ್ರಸ್ಟ್ ವಿವಿಧ ಸಂಘಟನೆಗಳು ಹಾಗೂ ತಾಲೂಕ ಆಡಳಿತದ ಸಂಯೋಗದಲ್ಲಿ ಶ್ರೀ ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕ ತಂಡಾಧಿಕಾರಿ ತಹಶೀಲ್ದಾರ್ ಪ್ರಕಾಶ್ ಹೊಳೆಪ್ಗೊಳ್ ವಹಿಸಿಕೊಂಡಿದ್ದರು
ಮುಖ್ಯ ಅತಿಥಿಗಳಾಗಿ ಮಹಾಲಿಂಗಪುರದ ಸಾಹಿತಿ ಡಾ. ಅಶೋಕ್ ನರೋಡೆ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಐನಾಪುರ್ ವಿರಕ್ತಮಠ ಟ್ರಸ್ಟ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಪಟ್ಟಣ ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕ ಅಧ್ಯಕ್ಷರಾದ ಜಿ ವಿ ನಾಡಗೌಡ್ರು ಪುರಸಭೆ ಮುಖ್ಯ ಅಧಿಕಾರಿ ಈರಣ್ಣ ಗುಡುದಾರಿ ಜಾಗತಿಕ ಲಿಂಗಾಯಿತ ಮಹಾಸಭಾ ಮಹಿಳಾ ತಾಲೂಕ ಅಧ್ಯಕ್ಷ ಗೀತಾ ಆರಿಬೆಂಚಿ ವೇದಿಕೆಯನ್ನು ಹಂಚಿಕೊಂಡಿದ್ದರು. ವೇದಿಕೆ ಮೇಲಿದ್ದ ಗಣ್ಯರೆಲ್ಲಾ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಉಪನ್ಯಾಸಕರಾಗಿ ಆಗಮಿಸಿದ ಮಹಾಲಿಂಗಪುರದ ಸಾಹಿತಿ ಡಾ. ಅಶೋಕ ನರುಡೆ ಶ್ರೀ ಬಸವೇಶ್ವರರ ಜೀವನ ಚರಿತ್ರೆ ಹಾಗೂ 12ನೇ ಶತಮಾನದಲ್ಲಿ ಶ್ರೀ ಬಸವೇಶ್ವರರು ನಡೆಸಿದ ಸಾಮಾಜಿಕ ಹೋರಾಟದ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಜಯಂತಿ ಅಂಗವಾಗಿ ಏರ್ಪಡಿಸಿದ ವಚನ ಕಂಠಪಾಠ ಮತ್ತು ಭಜನಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರೊ. ಎಸ್ ಎಂ ಸಕ್ರಿ ಸ್ವಾಗತಿಸಿದರು ಈರಣ್ಣ ಬುಡ್ಯಾಗೋಳ್ ಕಾರ್ಯಕ್ರಮ ನಿರೂಪಿಸಿದರು ಪ್ರೊ. ಉಮೇಶ ಗೋಲನ್ನವರ್ ಕಾರ್ಯಕ್ರಮಕ್ಕೆ ವಂದಿಸಿದರು
Trending Now



