Monday, August 10, 2026
25.7 C
Belagavi

ಕರ್ನಾಟಕದ ಬಾನಂಗಳದ ಹಿರಿಮೆ ಮತ್ತಷ್ಟು ವಿಸ್ತಾರ!

advertisement

spot_img

ಕರ್ನಾಟಕದ ಬಾನಂಗಳದ ಹಿರಿಮೆ ಮತ್ತಷ್ಟು ವಿಸ್ತಾರ!
ಜಾಗತಿಕ ಮಟ್ಟದ ಏರ್ ಬಸ್ ಇಂಡಿಯಾ ತಂತ್ರಜ್ಞಾನ ಕೇಂದ್ರದ 2ನೇ ಅತಿ ದೊಡ್ಡ GCC ಬೆಂಗಳೂರಿನಲ್ಲಿ ಉದ್ಘಾಟನೆ

ಜಾಗತಿಕ ವಿಮಾನೋದ್ಯಮ ದಿಗ್ಗಜ Airbus ತನ್ನ “ಏರ್ ಬಸ್ ಇಂಡಿಯಾ ತಂತ್ರಜ್ಞಾನ ಕೇಂದ್ರ (Airbus India Technology Centre) ಅನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದೆ. ಇದರೊಂದಿಗೆ ಕರ್ನಾಟಕದ ಬಾನಂಗಳದ ಹಿರಿಮೆ ಮತ್ತಷ್ಟು ವಿಸ್ತಾರಗೊಂಡಿದೆ.

ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ AirBus ಜಾಗತಿಕ ಮಟ್ಟದ ಎರಡನೇ ಅತಿದೊಡ್ಡ ‘ಏರ್ ಬಸ್ ಇಂಡಿಯಾ ಟೆಕ್ನಾಲಜಿ ಸೆಂಟರ್‘ (ATC) ಅನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ ಕಿಂಜರಾಪು ರಾಮ್ ಮೋಹನ್ ನಾಯ್ಡು (ವರ್ಚುವಲ್ ಮೂಲಕ) ಮತ್ತು ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಏರ್ ಬಸ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಹಾಗೂ ಎಂಡಿ ಶ್ರೀ Jurgen Westermeier, ಬೆಂಗಳೂರಿನ ಫ್ರೆಂಚ್ ಕಾನ್ಸಲ್ ಜನರಲ್ ಶ್ರೀ Marc Lamy, ಜರ್ಮನ್ ಜರ್ಮನ್ ಕಾನ್ಸುಲೇಟ್ ನ ಡೆಪ್ಯುಟಿ ಕಾನ್ಸಲ್ ಜನರಲ್ ಶ್ರೀಮತಿ Annett Bässler ಮತ್ತು ಏರ್ಬಸ್ ನ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದು ಭಾರತದ ವಿಶೇಷವಾಗಿ ಕರ್ನಾಟಕದ ತಾಂತ್ರಿಕ ಸಾಮರ್ಥ್ಯಕ್ಕೆ ಜಗತ್ತೇ ನೀಡಿರುವ ಗೌರವ. ಸುಮಾರು 8.8 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ, 5,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಅವಕಾಶ ಕಲ್ಪಿಸುವ ಈ ಕೇಂದ್ರ ವಿಮಾನೋದ್ಯಮದ ಇಂಜಿನಿಯರಿಂಗ್, ಡಿಜಿಟಲ್ ತಂತ್ರಜ್ಞಾನ, ಗ್ರಾಹಕ ಸೇವೆ ಹಾಗೂ ಸಂಶೋಧನೆಯ ಜಾಗತಿಕ ಕೇಂದ್ರವಾಗಲಿದೆ.ಇಲ್ಲಿ ಭಾರತೀಯ ಎಂಜಿನಿಯರ್ ಗಳ ಬುದ್ಧಿಮತ್ತೆ ಜಾಗತಿಕ ವಿಮಾನಗಳ ವಿನ್ಯಾಸದಿಂದ ಆರಂಭಿಸಿ ಮುಂದಿನ ಪೀಳಿಗೆಯ ತಂತ್ರಜ್ಞಾನಗಳ ತನಕ ಮಹತ್ವದ ಪಾತ್ರ ವಹಿಸಲಿದೆ. ಇದು “Make in India” ಸಾಧನೆ ಅಲ್ಲ; “Design in India, Innovate for the World” ಎಂಬ ಹೊಸ ಅಧ್ಯಾಯದ ಆರಂಭ.

ಬೆಂಗಳೂರು ಈಗಾಗಲೇ ಐಟಿ ರಾಜಧಾನಿಯಾಗಿದೆ. ಜಾಗತಿಕ ಏರೋಸ್ಪೇಸ್ ಮತ್ತು ನವೀನತೆಯ ಕೇಂದ್ರವಾಗಿಯೂ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ. ಭಾರತದ ಯುವ ಪ್ರತಿಭೆಗೆ ಇದು ಹೊಸ ಆಕಾಶದ ಬಾಗಿಲು ತೆರೆಯುವ ಘಟ್ಟ.

ಕರ್ನಾಟಕದ ಬುದ್ಧಿಶಕ್ತಿ ಜಗತ್ತಿನ ಆಕಾಶವನ್ನು ರೂಪಿಸುತ್ತಿದೆ!

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img