Monday, August 10, 2026
20.5 C
Belagavi

ತೀರ್ಥಹಳ್ಳಿಯ ಗುಮ್ಮನಮಕ್ಕಿಯಲ್ಲಿ ಐದೂರು ದೇವತೆಗಳ ಭವ್ಯ ಸಮಾಗಮ

advertisement

spot_img

ತೀರ್ಥಹಳ್ಳಿ:ತೀರ್ಥಹಳ್ಳಿ ತಾಲೂಕಿನ ಗುಮ್ಮನಮಕ್ಕಿ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಿತು. ಈ ಭಾಗದ ಪ್ರಸಿದ್ಧ ಐದೂರು ದೇವತೆಗಳ ಸಮಾಗಮಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು ಪುನೀತರಾದರು.ಮಾಳೂರು ಗಾಳಿಮಾರಮ್ಮ, ಸಮಕಾನಿ ದುರ್ಗಾಪರಮೇಶ್ವರಿ, ಆಲಬಳ್ಳಿ ಚಾಮುಂಡೇಶ್ವರಿ, ಗುತ್ತಿ ಎಡೇಹಳ್ಳಿ ಗುತ್ಯಮ್ಮ ಹಾಗೂ ಸೋಮವಾರಸಂತೆ ದುರ್ಗಾಪರಮೇಶ್ವರಿ ಅಮ್ಮನವರು ಮತ್ತು ಕುಮಾರಸ್ವಾಮಿ ದೇವರುಗಳ ಪಲ್ಲಕ್ಕಿಗಳು ವಾಲಗ, ವಾದ್ಯ ಹಾಗೂ ಡೋಲುಗಳ ಸದ್ದಿಗೆ ತಕ್ಕಂತೆ ಹೆಜ್ಜೆ ಹಾಕುತ್ತಾ ಸಮಾಗಮಗೊಂಡ ದೃಶ್ಯ ಭಕ್ತರ ಗಮನ ಸೆಳೆಯಿತು. ವಿವಿಧ ಸೀಮೆಗಳಲ್ಲಿ ನೆಲೆಸಿರುವ ಈ ದೇವಿಯರು ವರ್ಷಕ್ಕೊಮ್ಮೆ ತಮ್ಮ ತವರು ಮನೆಯಂತಿರುವ ಗುಮ್ಮನಮಕ್ಕಿಯಲ್ಲಿ ಒಟ್ಟಿಗೆ ಸೇರಿ, ಭಕ್ತರ ಇಷ್ಟಾರ್ಥಗಳನ್ನು ಪೂರೈಸಿ ಮರಳಿ ತಮ್ಮ ಸೀಮೆಗಳಿಗೆ ತೆರಳುತ್ತಾರೆ ಎಂಬುದು ಇಲ್ಲಿನ ವಿಶೇಷ ನಂಬಿಕೆಯಾಗಿದೆ.

ಜಾತ್ರೆಯ ಅಂಗವಾಗಿ ಮೈದಾನದಲ್ಲಿ ಆಟಿಕೆಗಳ ಮಳಿಗೆಗಳು ಹಾಗೂ ವಿವಿಧ ಖಾದ್ಯಗಳ ಸ್ಟಾಲ್‌ಗಳು ತುಂಬಿಕೊಂಡಿದ್ದವು . ಸಂಜೆ ವೇಳೆಗೆ ಹೆದ್ದೂರಿನಲ್ಲಿ ಹೊಸಹಳ್ಳಿ ಸೋಮವಾರ ಗುತ್ಯಮ್ಮ ದೇವಿಯ ಅದ್ದೂರಿ ತೆಪ್ಪೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದ ತೆಪ್ಪದಲ್ಲಿ ದೇವಿಯ ಮೆರವಣಿಗೆಯನ್ನು ಕೊರೆಯುವ ಚಳಿಯ ನಡುವೆಯೂ ನೂರಾರು ಭಕ್ತರು ಕಣ್ತುಂಬಿಕೊಂಡರು. ಇದೇ ಸಂದರ್ಭದಲ್ಲಿ ಸಮಕಾನಿ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದ ವತಿಯಿಂದ ಬೆಜ್ಜವಳ್ಳಿಯ ಅಂತ್ರೊಳ್ಳಿ ಕೆರೆ ಬಳಿ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಸಿಡಿಮದ್ದು ಪ್ರದರ್ಶನ ಜನಮನ ಗೆದ್ದಿತು.

ಜಾತ್ರಾ ಸಮಿತಿಯ ವತಿಯಿಂದ ಸಾರ್ವಜನಿಕರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಈ ಧಾರ್ಮಿಕ ಕಾರ್ಯಕ್ರಮಕ್ಕೆ ಅವಧೂತ ವಿನಯ್ ಗುರೂಜಿ ಅವರು ಆಗಮಿಸಿ ದರ್ಶನ ಪಡೆದದ್ದು ವಿಶೇಷವಾಗಿತ್ತು.

Hot this week

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

Topics

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ

ಪಿಎಚ್‌ಡಿ ಪದವಿ ಪಡೆದ ಜಹುರಬಾಶಾ ಕಲೆಗಾರರಿಗೆ ಅಭಿನಂದನೆ ರಾಮದುರ್ಗ: ಕಿತ್ತೂರು ರಾಣಿ ಚನ್ನಮ್ಮ...

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ ಬೊಮ್ಮಾಯಿ

ಹೊರಟ್ಟಿಯವರಿಂದ ರಾಜೀನಾಮೆ ಪಡೆದ ಸರ್ಕಾರದ ನಡೆ ಪರಿಷತ್ ಇಹಾಸದಲ್ಲಿ ಕಪ್ಪು ಚುಕ್ಕೆ:ಬಸವರಾಜ...

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ – 1,500 ಉದ್ಯೋಗ ಸೃಷ್ಟಿ

ಸೆಂಟಮ್ ಎಲೆಕ್ಟ್ರಾನಿಕ್ಸ್ ₹500 ಕೋಟಿ ಹೂಡಿಕೆಗೆ ವೇಗ - 1,500 ಉದ್ಯೋಗ...
spot_img

Related Articles

Popular Categories

spot_img