Monday, June 1, 2026
26.1 C
Belagavi

“ಕುರುಬ ಸಮುದಾಯವನ್ನು ಶೈಕ್ಷಣಿಕವಾಗಿ ಉನ್ನತೀಕರಿಸಬೇಕಿದೆ, ಕುರುಬರನ್ನು STಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ”

advertisement

spot_img

ಸಂಗೊಳ್ಳಿ ರಾಯಣ್ಣರ ಹೆಸರು ಶಾಶ್ವತಗೊಳಿಸಲು ರಾಯಣ್ಣ ಪ್ರಾಧಿಕಾರ ರಚಿಸಲಾಯಿತು: ಸಿ.ಎಂ.ಸಿದ್ದರಾಮಯ್ಯ..

ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಬರೆಸಿ: ಹೀಗಾದ್ರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ ಅನುಕೂಲ ಸಿಗುತ್ತದೆ: ಸಿ.ಎಂ..

ರಾಜ್ಯದ ಎಲ್ಲಾ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ: ಸಿ.ಎಂ.ಸಿದ್ದರಾಮಯ್ಯ..

ಕುರುಬ ಸಮುದಾಯವನ್ನು ST ಗೆ ಸೇರಿಸಲು ಮತ್ತೆ ಕೇಂದ್ರಕ್ಕೆ ಶಿಫಾರಸ್ಸು: ಸಿ.ಎಂ ಭರವಸೆ..

ಕಲ್ಬುರ್ಗಿ : ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಮೀಕ್ಷೆ ವೇಳೆ ಕುರುಬ ಅಂತಲೇ ಜಾತಿ ಹೆಸರನ್ನು ಬರೆಸಿದರೆ ಮಾತ್ರ ಸಮಾಜದ ಸ್ಥಿತಿ ಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ‌ ಅನುಕೂಲಗಳು ಸಿಗುತ್ತವೆ ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

ರಾಜ್ಯದ ಎಲ್ಲಾ ಜಾತಿ ಸಮುದಾಯಗಳ ಸ್ಪಷ್ಟ ಸ್ಥಿತಿ ಅರಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ಕುರುಬಗೊಂಡ ಸಂಘ ಮತ್ತು ಸಂಗೊಳ್ಳಿ ರಾಯಣ್ಣ ಯುವಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಯಣ್ಣ ಅವರ ಮೂರ್ತಿ ಅನಾವರಣಗೊಳಿಸಿ, ನಗರ ಸಿಟಿ ಬಸ್ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣರ ಹೆಸರು ನಾಮಕರಣ ಮಾಡಿ ಮಾತನಾಡಿದರು.

ಕುರುಬ ಸಮುದಾಯವನ್ನು ST ಗೆ ಸೇರಿಸಲು ಹಿಂದೆಯೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದನ್ನು ಕೇಂದ್ರ ಸರ್ಕಾರ ವಾಪಾಸ್ ಕಳುಹಿಸಿದೆ. ಹೀಗಾಗಿ ಮತ್ತೆ ಹೆಚ್ಚುವರಿ ಅಂಕಿ ಅಂಶಗಳು ಮತ್ತು ದಾಖಲೆಗಳ ಸಮೇತ ಕೇಂದ್ರಕ್ಕೆ ಮತ್ತೆ ಶಿಫಾರಸ್ಸು ಕಳುಹಿಸಲಾಗುವುದು ಎಂದು ಸಿ.ಎಂ ಭರವಸೆ ನೀಡಿದರು.

ರಾಯಣ್ಣ ಜನ್ಮ ದಿನ ಸ್ವಾತಂತ್ರ್ಯೋತ್ಸವದ ಆಗಸ್ಟ್ 15. ರಾಯಣ್ಣರನ್ನು ಬ್ರಿಟಿಷರು ಗಲ್ಲಿಗೆ ಏರಿಸಿದ್ದು ಜನವರಿ 26ರ ಗಣರಾಜ್ಯೋತ್ಸವ ದಿನದಂದು. ಇದು ಕಾತಾಳೀಯ ಆದರೂ ಸತ್ಯವಾದ ಸಂಗತಿ ಎಂದರು. ಸ್ವಾತಂತ್ರ್ಯ ಸೇನಾನಿ ರಾಯಣ್ಣ ಯುವಕರಿಗೆ ಪ್ರೇರಣೆ ಆಗಿದ್ದಾರೆ ಎಂದರು.‌

ಶೇ7 ರಷ್ಟಿರುವ ಕುರುಬ ಸಮುದಾಯ ಶಿಕ್ಷಣದಲ್ಲಿ ಬಹಳ ಹಿಂದುಳಿದಿದೆ. ಆದ್ದರಿಂದ ಸಮುದಾಯದ ಪ್ರತಿಯೊಬ್ಬರೂ ವಿದ್ಯಾವಂತರಾಗುವುದು ಅವಶ್ಯವಾಗಿದೆ. ಸಮುದಾಯವನ್ನು ಶಿಕ್ಷಣ ಕ್ಷೇತ್ರದಲ್ಲಿ ಉನ್ನತೀಕರಿಸಬೇಕಿದೆ ಎಂದರು.

ಇಡೀ ರಾಜ್ಯ ಪ್ರವಾಸ ಮಾಡಿ ಕನಕ ಗುರುಪೀಠ ಸ್ಥಾಪಿಸಿದೆವು. ಪೀಠದ ಉದ್ದೇಶ, ಎಲ್ಲಾ ಶೋಷಿತ ಸಮುದಾಯಗಳಿಗೂ ಶಿಕ್ಷಣ ಕೊಡುವುದೇ ಆಗಿತ್ತು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ನಾರಾಯಣಗುರು ಇಬ್ಬರೂ ಶಿಕ್ಷಣದಿಂದ ಸ್ವತಂತ್ರ ರಾಗಬಹುದು, ಸ್ವಾಭಿಮಾನಿಗಳಾಗಬಹುದು ಎಂದು ಹೇಳಿದ್ದಾರೆ. ಜಾತಿ ವ್ಯವಸ್ಥೆಯ ಕಾರಣಕ್ಕೆ ಅಸಮಾನತೆ ಸೃಷ್ಟಿಯಾಗಿದೆ ಎಂದರು.

ಜಾತಿ ರಹಿತ, ವರ್ಗ ರಹಿತ ಸಮಾಜ ಆಗಬೇಕು ಎನ್ನುವುದು ಬುದ್ದ, ಬಸವ, ಅಂಬೇಡ್ಕರ್ ಎಲ್ಲರ ಆಶಯವಾಗಿತ್ತು. ನಮ್ಮ ಸರ್ಕಾರ ಕೂಡ ಅಸಮಾನತೆ ಹೋಗಲಾಡಿದರು ಹತ್ತು ಹಲವು ಭಾಗ್ಯಗಳನ್ನು ನೀಡಿ, ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಎಂದರು.

ಆರ್ಥಿಕ ಚಲನೆ ಇಲ್ಲದ ಸಮಾಜ ಪ್ರಗತಿ ಕಾಣಲು ಸಾಧ್ಯವಿಲ್ಲ. ಆದ್ದರಿಂದ ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಿತ ಸಮುದಾಯಗಳು ಚಲನೆ ಕಂಡುಕೊಳ್ಳಬೇಕು. ಆಗಲೇ ಬುದ್ದ, ಬಸವ, ಅಂಬೇಡ್ಕರ್ ಕನಸು ನನಸಾಗುತ್ತದೆ. ಈ ಕನಸು ನನಸಾಗುವ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗಲೇ ಹಿಂದುಳಿದವರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡಿಸಿದ್ಧೆ ಎಂದರು.

ರಾಜ್ಯ ಸುತ್ತಿ ಮಠ ಮಾಡಿದ್ದು ನಾವು: ಸಿ.ಎಂ..

ಇಡೀ ರಾಜ್ಯ ಸುತ್ತಿ ಮಠ ಮಾಡಿದ್ದು ನಾವು. ಆದರೆ ಈಗ ಕೆಲವು ಡೋಂಗಿ ಜನ‌ ನಾವೇ ಮಠ ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರ ಮಾತು ನಂಬಬೇಡಿ. ತೀರ್ಮಾನ ನಿಮಗೆ ಬಿಡ್ತೀನಿ. ನಿಮ್ಮ ಪ್ರೀತಿ, ವಿಶ್ವಾಸ ಸದಾ ನನ್ನ ಮೇಲೆ ಇರಲಿ. ನಾನು ರಾಜಕಾರಣ ಮಾಡೋದೇ ಸಾಮಾಜಿಕ ನ್ಯಾಯಕ್ಕಾಗಿ. ನಾನು ಅಧಿಕಾರದಲ್ಲಿ ಇರಲಿ, ಬಿಡಲಿ ಸಾಮಾಜಿಕ ನ್ಯಾಯಕ್ಕಾಗಿಯೇ ಕೆಲಸ ಮಾಡ್ತೀನಿ. ನಾವೆಲ್ಲರೂ ಕನಕದಾಸರು ಮತ್ತು ಸಂಗೊಳ್ಳಿ ರಾಯಣ್ಣ ಅವರು ನಡೆದ ದಾರಿಯಲ್ಲೇ ನಡೆಯೋಣ ಎಂದು ಕರೆ ನೀಡಿದರು.

Hot this week

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

Topics

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಮಾಜಿ ಸಚಿವ ಹೆಚ್. ವೆಂಕಟರಮಣ್ಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ ತಳಸಮುದಾಯದವರ ಬಗ್ಗೆ...

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ ಸ್ವೀಕಾರ

ನೂತನ ಸಿಎಂ ಆಗಿ ಡಿ ಕೆ ಶಿವಕುಮಾರ್ ಬುಧವಾರ ಪ್ರಮಾಣ ವಚನ...

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ರಾಜ್ಯಸಭೆ ಅಭ್ಯರ್ಥಿಗಳ ಪಟ್ಟಿ ಒಟ್ಟಿಗೆ ಬಿಡುಗಡೆ: ಡಿ.ಕೆ. ಶಿವಕುಮಾರ್ ನವದೆಹಲಿ,  "ನನಗೆ...

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಯಾವುದೇ...

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ

ಯುವಕರಿಗೆ ಶಿಕ್ಷಣ, ಉದ್ಯೋಗ, ಅಧಿಕಾರ ನೀಡಿದರೆ ಉಜ್ವಲ ಭವಿಷ್ಯ ಬರೆಯುತ್ತಾರೆ:ಬಸವರಾಜ ಬೊಮ್ಮಾಯಿ ಸೋಲು,...

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ

ಬೆಂಗಳೂರು ನಗರದ ಮೊಳೆ ಮಾಫಿಯಾ ವಿರುದ್ಧ ಕ್ರಮಕ್ಕೆ ಆಯುಕ್ತರಿಗೆ ಪತ್ರ ಬೆಂಗಳೂರು: ಮೇ...

ನಾಯಕತ್ವ ಬದಲಾವಣೆ ಬೆನ್ನಲ್ಲೇ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಬೆಳಗಾವಿ ಶಾಸಕರುಗಳು.

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನಂತರ ಹೊಸ ಮುಖ್ಯಮಂತ್ರಿ ಆಯ್ಕೆ...

ಡಿ.ಕೆ. ಶಿವಕುಮಾರ್ ಅವರ ಪರಿಚಯ

ಡಿ.ಕೆ. ಶಿವಕುಮಾರ್ ಅವರ ಪರಿಚಯ ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ...
spot_img

Related Articles

Popular Categories

spot_img