Saturday, April 11, 2026
28.1 C
Belagavi

ಬಸವರಾಜ ಕಟ್ಟಿಮನಿ ಕಥೆಗಳಲ್ಲಿ ಸಮಾಜ ಸುಧಾರಣೆಯ ಧೀರತನವಿದೆ – ಶಿದ್ಲಿಂಗ ಗಾಳಿ

advertisement

spot_img

ರಾಮದುರ್ಗ: ಪ್ರಗತಿಶೀಲ ಸಾಹಿತ್ಯ ಪಂಥದ ಪ್ರಮುಖ ಕಥೆಗಾರರಾದ ಬಸವರಾಜ ಕಟ್ಟಿಮನಿ ಅವರ ಕಥೆಗಳಲ್ಲಿ ಗಾಢವಾದ ಜೀವನಾನುಭವ, ಹಳೆಯ ಸಂಪ್ರದಾಯಕ್ಕೆ ಮನಿಯದೇ ಹೊಸದನ್ನು ಹುಟ್ಟು ಹಾಕುವ,ಸಮಾಜ ಸುಧಾರಣೆಯ ಧೀರತನದ ಮನೋಭಾವನೆಗಳು ಸ್ಪಷ್ಟವಾಗಿ ಎದ್ದು ಕಾಣುತ್ತವೆ ಎಂದು ಯರಗಟ್ಟಿ ಸಿಎಂ ಮಾಮನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಶಿದ್ಲಿಂಗ ಗಾಳಿ ಅಭಿಪ್ರಾಯಸಿದರು.

ರಾಮದುರ್ಗದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ಕನ್ನಡ ವಿಭಾಗ ಮತ್ತು ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜರುಗಿದ ಕಟ್ಟಿಮನಿ ಕಥಿ ಹೇಳೂಣು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಗಾಳಿ ಅವರು, ಕಟ್ಟಿಮನಿ ಅವರ ಕಥೆಗಳಲ್ಲಿ ಖಡ್ಗದ ಹರಿತ, ಬೆಂಕಿಯಂಥ ಕಿಡಿಗಳು, ಮಿಂಚಿನಂಥ ಹೊಳಪು ಮತ್ತು ವಜ್ರದಂತ ಕಾಠಿಣ್ಯತೆಗಳನ್ನು ಕಾಣುತ್ತೇವೆ. ಕಟ್ಟಿಮನಿ ಅವರ ಕಥೆಗಳ ವಸ್ತುವಿನ ಆಯ್ಕೆಯಲ್ಲಿ ಸ್ಪಷ್ಟತೆ, ಖಚಿತವಾದ ಧೋರಣೆಗಳಿದ್ದು, ಸಣ್ಣ- ಸಣ್ಣ ಘಟನಾವಳಿಗಳನ್ನು ಅತ್ಯಂತ ಮಾರ್ಮಿಕವಾಗಿ ಸಮಾಜಮುಖಿಯಾಗಿ ಕಥೆಗಳನ್ನು ರಚಿಸುವ ಮೂಲಕ ಬಸವರಾಜ ಕಟ್ಟಿಮನಿ
ಅವರು ಒಬ್ಬ ಶ್ರೇಷ್ಠ ಕಥೆಗಾರರಾಗಿ ಕನ್ನಡ ಸಾಹಿತ್ಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸದಸ್ಯ ಪ್ರೊ. ಎಸ್ ಜಿ. ಚಿಕ್ಕನರಗುಂದ ಅವರು ಬಸವರಾಜ ಕಟ್ಟಿಮನಿ ಓರ್ವ ಜಾತ್ಯತೀತ ವ್ಯಕ್ತಿಯಾಗಿ ಬದುಕಿದವರು.ಬದುಕಿದಂತೆ ಬರೆದವರು. ಅವರ ಕಥೆಗಳೆಲ್ಲವೂ ವಾಸ್ತವತೆಯ ಪ್ರತಿನಿಧಿಗಳಾಗಿವೆ ಎಂದು ಹೇಳಿದರು.
ಕಾಲೇಜಿನ ಐಕ್ಯುಎಸಿ ಸಂಯೋಜಕ ಪ್ರೊ. ಸಂಜಯ ಹಾದಿಮನಿ ಮಾತನಾಡಿ, ಬಸವರಾಜ ಕಟ್ಟಿಮನಿಯವರ ಕಥೆಗಳು ಅತ್ಯಂತ ಸರಳವಾಗಿದ್ದು, ಬದುಕಿನ ಬದುಕಿನ ಬವಣೆಗಳನ್ನು ತುಂಬಾ ಮಾರ್ಮಿಕವಾಗಿ ತಿಳಿಸಿ ಕೊಡುತ್ತವೆ ಎಂದು ಹೇಳಿದರು
ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎಂ. ಡಿ. ಕಮತಗಿ ವಹಿಸಿದ್ದರು.ಕಟ್ಟಿಮನಿ ಕಥಿ ಹೇಳೂಣು ಸ್ಪರ್ಧೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ಅವರುಗಳಲ್ಲಿ ಅಜಯ ಬಿರಾದರ ಪಾಟೀಲ (ಪ್ರಥಮ), ರಕ್ಷಿತಾ ಕಾಳೆ (ದ್ವಿತೀಯ ), ಶಿವಾನಂದ ಕಳ್ಳಿಮನಿ (ತೃತೀಯ ) ಹಾಗೂ ಪೂರ್ಣಿಮಾ ಶಿಪ್ರಿ ಸಮಾಧಾನಕರ ಬಹುಮಾನವನ್ನು ಪಡೆದುಕೊಂಡಿದ್ದು, ಬಹುಮಾನ ವಿಜೇತರಿಗೆ ಗಣ್ಯರು ಪ್ರಶಸ್ತಿ ಪತ್ರ ಹಾಗೂ ನಗದನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕ ಸಂಜಯ ಹಾದಿಮನಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಮ್. ಆರ್ ದೊಡ್ಡಮನಿ, ಡಾ. ವೆಂಕಟೇಶ
ಪರಶುರಾಮ ಮುಕಾರಿ,ಡಾ.ವಾಯ. ಎಸ್.ಹೊಸಮನಿ, ಯಲ್ಲಪ್ಪ ಕುರಿ, ಮಾರುತಿ ಸುಳಿಕೇರಿ, ಸೋಮೇಶ ಹೊಸಕೋಟಿ, ಡಾ ಮಹಾಲಕ್ಷ್ಮಿಭೂಶಿ ಸೇರಿದಂತೆ ಕಾಲೇಜಿನ ಎಲ್ಲ ಪ್ರಾಧ್ಯಾಪಕ ಸಿಬ್ಬಂದಿ ವರ್ಗ ಇದ್ದರು.
ಕಾಲೇಜಿನ ವಿದ್ಯಾರ್ಥಿನಿ ಯಮುನಾ ಕಾಳಂಗಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಕಾವ್ಯಾ ಶಿಂಧೆ ಹಾಗೂ ಸಂಗಡಿಗರು ಸ್ವಾಗತಗೀತೆ ಹಾಡಿದರು. ಕನ್ನಡ ಉಪನ್ಯಾಸಕ ಡಾ.ರಾಜು ಕಂಬಾರ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಂ ಆರ್. ದೊಡಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕೃತಿಕಾ ಚಿಕ್ಕೊರಮಠ ಮತ್ತು ಪೂರ್ಣಿಮಾ ಶಿಪ್ರಿ ನಿರೂಪಿಸಿದರು. ಶಿವಲೀಲಾ ಹಡಪದ ವಂದಿಸಿದರು.

ರಾಮದುರ್ಗ ಪಟ್ಟಣದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯ್ತು ಎಸಿ ಕನ್ನಡ ವಿಭಾಗ ಮತ್ತು ಬೆಳಗಾವಿಯ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಟ್ಟಿಮನಿ ಕಥಿ ಹೇಳೂಣು ಕಾರ್ಯಕ್ರಮವನ್ನು ಯರಗಟ್ಟಿ ಸಿಎಂ ಮಾಮುನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಅಧ್ಯಾಪಕ ಶಿದ್ಲಿಂಗ ಗಾಳಿ ಸಸಿಗೆ ನೀರೂಣಿಸುವ ಮೂಲಕ ಉದ್ಘಾಟಿಸಿದರು.ರಾಮದುರ್ಗ ಪಟ್ಟಣದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯ್ತು ಎಸಿ ಕನ್ನಡ ವಿಭಾಗ ಮತ್ತು ಬೆಳಗಾವಿಯ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಟ್ಟಿಮನಿ ಕಥಿ ಹೇಳೂಣು ಕಾರ್ಯಕ್ರಮದಲ್ಲಿ ಕಥಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗಣ್ಯರು ಸತ್ಕರಿಸಿ ಗೌರವಿಸಿದರು.

ರಾಮದುರ್ಗ ಪಟ್ಟಣದ ಈರಮ್ಮ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಆಯ್ತು ಎಸಿ ಕನ್ನಡ ವಿಭಾಗ ಮತ್ತು ಬೆಳಗಾವಿಯ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಟ್ಟಿಮನಿ ಕಥಿ ಹೇಳೂಣು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಡಾ.ಎಂ.ಡಿ.ಕಮತಗಿ ಮಾತನಾಡಿದರು.

Hot this week

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

Topics

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು...

ರೈತರ ಜಾನುವಾರುಗಳಿಗೆ ಉಚಿತವಾಗಿ ಆರೋಗ್ಯ ಶಿಬಿರ

ರೈತರ ಜಾನುವಾರುಗಳಿಗೆ ಇಂದು ಉಚಿತವಾಗಿ ಆರೋಗ್ಯ ಶಿಬಿರವನ್ನ ನಡೆಸಲಾಯಿತು.ರಾಣಿ ಚೆನ್ನಮ್ಮಾ ವಿಶ್ವ...

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ!

ಬೇಸಿಗೆ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ವಿಜಯಪುರ ಜಿಲ್ಲಾಡಳಿತ ಸಿದ್ಧ! ಆಲಮಟ್ಟಿಯಿಂದ ನಗರಕ್ಕೆ...

ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ

*ಸ್ವಾತಂತ್ರ್ಯ ಹೋರಾಟಗಾರ ಅರಟಾಳ ರುದ್ರಗೌಡರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ:ಬಸವರಾಜ ಬೊಮ್ಮಾಯಿ* ಕೆಎಲ್ ಇ...

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ: ಡಿಸಿಎಂ ಡಿ.ಕೆ....

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ

ದಾವಣಗೆರೆ ದಕ್ಷಿಣ ಉಪಚುನಾವಣಾ ಕಣ : ನಾಗರಸನಹಳ್ಳಿಯಲ್ಲಿ ಮನೆ-ಮನೆಗೆ ತೆರಳಿ ಮತಯಾಚನೆ ದಾವಣಗೆರೆ...

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ:...

ಹಳ್ಳಿ-ಹಳ್ಳಿಯಲ್ಲೂ ಕಾಂಗ್ರೆಸ್ ಅಲೆ, ಮನೆ-ಮನೆಯಲ್ಲೂ ಉಮೇಶ್ ಮೇಟಿ ಗೆಲುವಿನ ಕಹಳೆ

ಬಾಗಲಕೋಟೆ ಉಪಚುನಾವಣೆಯ ಅಖಾಡದಲ್ಲಿ ಈಗ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ! ಹಳ್ಳಿ ಇರಲಿ,...
spot_img

Related Articles

Popular Categories

spot_img