Wednesday, August 12, 2026
20.7 C
Belagavi

ಉಸಿರಾಟದ ಸಮಸ್ಯೆಯಿದ್ದರೂ ಕುಗ್ಗದ ಭಕ್ತಿ! ಆಕ್ಸಿಜನ್ ಸಿಲಿಂಡರ್ ಜೊತೆ ಚಿಂಚಲಿ ಮಾಯಕ್ಕನ ದರ್ಶನ ಪಡೆದ ದಂಪತಿ.

advertisement

spot_img

ಉಸಿರಾಟದ ಸಮಸ್ಯೆಯಿದ್ದರೂ ಕುಗ್ಗದ ಭಕ್ತಿ! ಆಕ್ಸಿಜನ್ ಸಿಲಿಂಡರ್ ಜೊತೆ ಚಿಂಚಲಿ ಮಾಯಕ್ಕನ ದರ್ಶನ ಪಡೆದ ದಂಪತಿ.

​ಆಂಕರ್ ದೈವ ಭಕ್ತಿ ಎನ್ನುವುದು ಎಂತಹ ಕಷ್ಟವನ್ನಾದರೂ ಮೆಟ್ಟಿ ನಿಲ್ಲುವ ಶಕ್ತಿ ನೀಡುತ್ತದೆ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಸಿಕ್ಕಿದೆ. ಅನಾರೋಗ್ಯ, ಉಸಿರಾಟದ ಸಮಸ್ಯೆ ಇದ್ದರೂ ಲೆಕ್ಕಿಸದೆ, ಆಕ್ಸಿಜನ್ ಸಿಲಿಂಡರ್ ಅಳವಡಿಸಿಕೊಂಡೇ ದಂಪತಿಯೊಬ್ಬರು ಸುಪ್ರಸಿದ್ಧ ಚಿಂಚಲಿ ಮಾಯಕ್ಕ ದೇವಿಯ ದರ್ಶನ ಪಡೆದಿದ್ದಾರೆ. ಈ ಅಪರೂಪದ ಹಾಗೂ ಭಕ್ತಿಪರವಶದ ಕ್ಷಣಗಳಿಗೆ ಸಾಕ್ಷಿಯಾಯ್ತು ಚಿಂಚಲಿ ಕ್ಷೇತ್ರ.​ಅನಾರೋಗ್ಯ, ಉಸಿರಾಟದ ಸಮಸ್ಯೆ ಇದ್ದರೂ ಲೆಕ್ಕಿಸದೆ, ಆಕ್ಸಿಜನ್ ಸಿಲಿಂಡರ್ ಅಳವಡಿಸಿಕೊಂಡೇ ದಂಪತಿಯೊಬ್ಬರು ಗಡಿನಾಡು ಶಕ್ತಿ ದೇವತೆ ಬಂಡಾರ ಒಡತಿ ಚಿಂಚಲಿ ಮಾಯಕ್ಕ ದೇವಿಯ ದರ್ಶನ ಪಡೆದಿರುವ ಅಪರೂಪ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಐತಿಹಾಸಿಕ ಚಿಂಚಲಿ ಮಾಯಕ್ಕ ದೇವಿಯ ಸನ್ನಿಧಿಯಲ್ಲಿ ಇಂದು ಭಕ್ತಿಯ ಪರಾಕಾಷ್ಠೆಯೊಂದು ಕಂಡುಬಂತು. ಸಾಮಾನ್ಯವಾಗಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೇ ದೇವಸ್ಥಾನಕ್ಕೆ ಹೋಗಲು ಹಿಂದೇಟು ಹಾಕುವವರ ಮಧ್ಯೆ, ಮಹಾರಾಷ್ಟ್ರ ಪಂಡರಪುರ ಈ ದಂಪತಿಗಳ ಭಕ್ತಿ ಎಲ್ಲರ ಗಮನ ಸೆಳೆದಿದೆ. ​ತೀವ್ರವಾದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪತಿಯು, ಮೂಗಿಗೆ ಆಕ್ಸಿಜನ್ ಪೈಪ್ ಅಳವಡಿಸಿಕೊಂಡು, ಒಂದು ಕೈಯಲ್ಲಿ ಆಕ್ಸಿಜನ್ ಸಿಲಿಂಡರ್ ಹಿಡಿದುಕೊಂಡೇ ದೇವಿಯ ಸನ್ನಿಧಿಗೆ ಆಗಮಿಸಿದ್ದರು. ಇವರಿಗೆ ಸಾಥ್ ನೀಡಿದ ಪತ್ನಿ, ಹೆಜ್ಜೆ ಹೆಜ್ಜೆಗೂ ಪತಿಯನ್ನು ಜಾಗರೂಕತೆಯಿಂದ ಕರೆತಂದು ಗಡಿನಾಡು ಶಕ್ತಿ ದೇವತೆ ಮಾಯಕ್ಕನ ದರ್ಶನ ಮಾಡಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರೆಗೆ ದಂಪತಿ ಆಗಮಿಸಿ ದೇವರ ಮೇಲಿನ ನಂಬಿಕೆ ಇದ್ದರೆ ರೋಗ-ರುಜಿನಗಳು ಅಡ್ಡಿಯಾಗುವುದಿಲ್ಲ” ಎಂಬ ಮಾತನ್ನು ಈ ದಂಪತಿಗಳು ಅಕ್ಷರಶಃ ಪಾಲಿಸಿದ್ದಾರೆ. ಆಕ್ಸಿಜನ್ ಸಹಾಯವಿಲ್ಲದೆ ಉಸಿರಾಡಲು ಕಷ್ಟವಾಗುವ ಪರಿಸ್ಥಿತಿಯಲ್ಲೂ, ಮಾಯಕ್ಕನ ಮೇಲಿನ ಅಪಾರ ನಂಬಿಕೆಯಿಂದ ಅವರು ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಈ ದೃಶ್ಯವನ್ನು ಕಂಡ ಭಕ್ತರು ದಂಪತಿಗಳ ದೈವಭಕ್ತಿಗೆ ಕೈ ಮುಗಿದಿದ್ದಾರೆ.
ದೇವಿಯ ಉತ್ಸವ ಒಂದುವಾರ ಇರುವ ಮೊದಲೇ ಇವರಿಗೆ ಅನಾರೋಗ್ಯ ಕಾಡಿದೆ, ಕಳೆದ ಐದಾರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ವಾಡಿಕೆಯಂತೆ ಪ್ರತಿ ವರ್ಷ ದೇವಿಯ ದರ್ಶನ ಪಡೆಯುವುದು ಇವರ ಮನೆತನದ ಪರಂಪರೆಯಾಗಿದ್ರಿಂದ ಆರೋಗ್ಯವನ್ನು ಲೆಕ್ಕಿಸದೆ ದೇವಿಯ ದರ್ಶನವನ್ನು ಪಡೆದಿದ್ದೇವೆ ನಮಗೆ ದೇವಿಯ ದರ್ಶನ ಪಡೆದು ಊರಿಗೆ ಹಿಂದಿರುಗುತ್ತಿದ್ದೇವೆ, ವೈದರು ಕೂಡ ಯಾವುದೇ ಸಮಸ್ಯೆ ಇಲ್ಲ ಹೋಗಿ ಬನ್ನಿ ಅಂತ ಹೇಳಿದರು ಇದರಿಂದ ದೇವರಿಗೆ ಬಂದಿದ್ದೇವೆ ಎಂದು ಅನಾರೋಗ್ಯ ಮಹಿಳೆಯ ಪತಿ ಸ್ಥಳೀಯರಿಗೆ ವಿವರಿಸಿದ್ದರು

Hot this week

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

Topics

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ - ಸರ್ವಜ್ಞನಗರದಲ್ಲಿ ಕೆಪಿಟಿಸಿಎಲ್...

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ

ರಾಮದುರ್ಗದಲ್ಲಿ ಎಬಿವಿಪಿಯಿಂದ ಅದ್ಧೂರಿ ತಿರಂಗ ಯಾತ್ರೆ ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ...

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಪರಿಶೀಲನೆ

ಮಳೆ ಕೊರತೆಯಿಂದ ಬೆಳೆ ಹಾನಿ: ಚಾಮನಹಳ್ಳಿಹುಂಡಿ ಗ್ರಾಮದಲ್ಲಿ ಸಚಿವ ಡಾ. ಯತೀಂದ್ರ...

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ. ಯತೀಂದ್ರ ಸಿದ್ದರಾಮಯ್ಯ

ಜನರ ಸಹಕಾರದೊಂದಿಗೆ ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಡಾ....

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್

ದೇಶದ ಉಜ್ವಲ ಭವಿಷ್ಯಕ್ಕಾಗಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಬೇಕು: ಬಿ.ಕೆ.ಹರಿಪ್ರಸಾದ್ ಬೆಂಗಳೂರು : ಕರ್ನಾಟಕ...

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ:...

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ

ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಸಾಮಾಜಿಕ ನ್ಯಾಯ,...
spot_img

Related Articles

Popular Categories

spot_img