Friday, July 24, 2026
22.4 C
Belagavi

ನವನಗರ ಬಸ್ ನಿಲ್ದಾಣ ಅವ್ಯವಸ್ಥೆ ಕಂಡು ಸು-ಮೋಟೋ ಪ್ರಕರಣ ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

advertisement

spot_img

ನವನಗರ ಬಸ್ ನಿಲ್ದಾಣ ಅವ್ಯವಸ್ಥೆ ಕಂಡು ಸು-ಮೋಟೋ ಪ್ರಕರಣ ದಾಖಲಿಸಿದ ಉಪ ಲೋಕಾಯುಕ್ತ ಬಿ. ವೀರಪ್ಪ

ಶಾಲಾ ಮಕ್ಕಳ ಅಳಲು ಆಲಿಸಿದ ಉಪ ಲೋಕಾಯುಕ್ತರು – ಸಮಯಕ್ಕೆ ಬಸ್ ಸಂಚಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ತಾಕೀತು
————————————
ಬಾಗಲಕೋಟೆ, : ಜಿಲ್ಲಾ ಪ್ರವಾಸದಲ್ಲಿರುವ ರಾಜ್ಯದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ನವನಗರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಮಯಕ್ಕೆ ಬಸ್ ಸೌಲಭ್ಯ ದೊರೆಯದೇ ಪ್ರತಿದಿನ ತಡವಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ವಿದ್ಯಾರ್ಥಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಉಪ ಲೋಕಾಯುಕ್ತರು, ನವನಗರ ಬಸ್ ನಿಲ್ದಾಣದಲ್ಲಿನ ವ್ಯವಸ್ಥೆ, ಸಮರ್ಪಕ ಬಸ್ ಸಂಚಾರದ ಕೊರತೆ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ, ಅವಧಿ ಮುಗಿದ ಜ್ಯೂಸ್ ಬಾಟಲ್, ಹೊಟೆಲ್ ನಲ್ಲಿ ತಿಂಡಿ ಪದಾರ್ಥಗಳನ್ನು ತೆರೆದಿಟ್ಟಿರುವುದು ಸೇರಿದಂತೆ ಇತರೆ ಸಮಸ್ಯೆಗಳನ್ನು ಕಂಡು ಸು ಮೋಟೋ (ಸ್ವಯಂಪ್ರೇರಿತ) ಪ್ರಕರಣ ದಾಖಲಿಸಿದರು.

ಬಸ್ ವಿಳಂಬದಿಂದ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ. ಶಾಲಾ-ಕಾಲೇಜು ಆರಂಭ ಮತ್ತು ಮುಕ್ತಾಯದ ವೇಳೆಗೆ ಅಗತ್ಯ ಪ್ರಮಾಣದಲ್ಲಿ ಬಸ್‌ಗಳನ್ನು ಓಡಿಸುವಂತೆ ಸಂಬಂಧಪಟ್ಟ ವಿಭಾಗೀಯ ನಿಯಂತ್ರಣಾಧಿಕಾರಿ ಎನ್.ಟಿ.ಪಾಟೀಲ ಅವರಿಗೆ ಸೂಚನೆ ನೀಡಿದರು.ಅಲ್ಲದೆ, ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅಗತ್ಯ ಮೂಲಸೌಕರ್ಯ, ಸ್ವಚ್ಛತೆ, ಮಾಹಿತಿ ವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ನಿಗದಿತ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಉಪ ಲೋಕಾಯುಕ್ತರು ಸೂಚಿಸಿದರು.

ಬೇಟಿ ವೇಳೆಯಲ್ಲಿ ಉಪ ಲೋಕಾಯುಕ್ತರ ಪರ್ಸನಲ್ ಸೆಕರೇಟರಿ ಹಾಗೂ ಸೇಷನ್‌ಜಡ್ಜ ಅರವಿಂದ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಸಿಇಒ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಲೋಕಾಯುಕ್ತ ಇಲಾಖೆಯ ಎಸ್.ಪಿ ನಂದಗಾಂವಿ, ಡಿವಾಯ್.ಎಸ್.ಪಿ ಸುರೇಶ ರೆಡ್ಡಿ, ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ಇತರರು ಇದ್ದರು.

Hot this week

ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಎರಡು ಡಿಸಿಎಂ ಹಾಗೂ ಹೆಚ್ಚಿನ ಸಚಿವ ಸ್ಥಾನ ನೀಡಲು ಆಗ್ರಹ

ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಎರಡು ಡಿಸಿಎಂ ಹಾಗೂ ಹೆಚ್ಚಿನ ಸಚಿವ...

ಬಾದಾಮಿ:ಮಳೆಗಾಗಿ ಕೆರಕಲಮಟ್ಟಿಯಲ್ಲಿ ‘ಗುರ್ಜಿ ಪೂಜೆ’

ಮಳೆಗಾಗಿ ಕೆರಕಲಮಟ್ಟಿಯಲ್ಲಿ ‘ಗುರ್ಜಿ ಪೂಜೆ’ ಬಾದಾಮಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ತಾಲ್ಲೂಕಿನ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

Topics

ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಎರಡು ಡಿಸಿಎಂ ಹಾಗೂ ಹೆಚ್ಚಿನ ಸಚಿವ ಸ್ಥಾನ ನೀಡಲು ಆಗ್ರಹ

ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಎರಡು ಡಿಸಿಎಂ ಹಾಗೂ ಹೆಚ್ಚಿನ ಸಚಿವ...

ಬಾದಾಮಿ:ಮಳೆಗಾಗಿ ಕೆರಕಲಮಟ್ಟಿಯಲ್ಲಿ ‘ಗುರ್ಜಿ ಪೂಜೆ’

ಮಳೆಗಾಗಿ ಕೆರಕಲಮಟ್ಟಿಯಲ್ಲಿ ‘ಗುರ್ಜಿ ಪೂಜೆ’ ಬಾದಾಮಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ತಾಲ್ಲೂಕಿನ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನ ಅನಿವಾರ್ಯ: ಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಎಲ್ ನ...

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ:-ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್

ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ಎಲ್ಲರೂ ಸಹಕರಿಸಿ: -ಮುಖ್ಯ ಚುನಾವಣಾ ಅಧಿಕಾರಿ ವಿ.ಅನ್ಬುಕುಮಾರ್ ಧಾರವಾಡ...

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ

ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನವೀಕೃತ ಕೊಠಡಿ ಹಾಗೂ ನಾಮಫಲಕ ಅನಾವರಣ ರಾಮದುರ್ಗ...

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿ ಕೆ ಶಿವಕುಮಾರ್ ಕೆಪಿಎಸ್...

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ನಿರ್ದೇಶನ

15 ದಿನದಲ್ಲಿ ಕೇಂದ್ರಕ್ಕೆ ಸಲ್ಲಿಸಲು ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ...
spot_img

Related Articles

Popular Categories

spot_img